ಕುಂಟಿಕಾನ ಮಠದಲ್ಲಿ ಶತ ರುದ್ರಾಭಿಷೇಕ, ಭಜನೆ

ಬದಿಯಡ್ಕ: ನೀರ್ಚಾಲು ಕುಂಟಿಕಾನ ಮಠ ಶ್ರೀ ಶಂಕರನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜಾ ಮಹೋತ್ಸವದ ಪ್ರಯುಕ್ತ ಶ್ರೀದೇವರಿಗೆ ಶತರುದ್ರಾಭಿಷೇಕ ನಡೆಯಿತು. ಇದೇ ಸಂದರ್ಭದಲ್ಲಿ ಕುಂಬಳೆ ಅನಂತಪುರ ಶ್ರೀ ಅನಂತಪದ್ಮನಾಭ ಮಹಿಳಾ ಭಜನಾ ಮಂಡಳಿ ಇವರಿಂದ ಭಜನೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು. ಶ್ರೀಕ್ಷೇತ್ರದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದ್ದು, ಅನ್ನಪೂರ್ಣೇಶ್ವರೀ ಗುಡಿ, ಗರ್ಭಗುಡಿ, ನಮಸ್ಕಾರ ಮಂಟಪದ ಕೆಲಸ ಪೂರ್ಣಗೊಂಡಿದೆ. ಮಾಡಿಗೆ ತಾಮ್ರ ಅಳವಡಿಸಲಾಗಿದ್ದು, ರಾಜಾಂಗಣದ ಮುಂಭಾಗಕ್ಕೆ ಶಾಶ್ವತ ಚಪ್ಪರದ ಕೆಲಸ ಪ್ರಗತಿಯಲ್ಲಿದೆ.

Leave a Reply

Your email address will not be published. Required fields are marked *

You cannot copy content of this page