೨.೭ಲೀಟರ್ ಕರ್ನಾಟಕ ಮದ್ಯ ವಶ ಸ್ಕೂಟರ್ ಕಸ್ಟಡಿಗೆ

ಕಾಸರಗೋಡು: ಕಾಸರಗೋಡು ಅಬಕಾರಿ ರೇಂಜ್‌ನ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಜೋಸೆಫ್ ಜೆ.ರ ನೇತೃತ್ವದ ತಂಡ ಚೆಂಗಳ ವಿ.ಕೆ. ಪಾರದಲ್ಲಿ ನಿನ್ನೆ ನಡೆಸಿದ ಕಾರ್ಯಾ ಚರಣೆಯಲ್ಲಿ ೨.೭ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿ ವಿ.ಕೆ. ಪಾರದ ಮನೋಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಆತ ಆ ವೇಳೆ ಪರಾರಿ ಯಾಗಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡಗಳು ಎಇಐ ಗ್ರೇಡ್ ರಾಜೀವನ್ ಎ.ವಿ, ಸಿಇಒಗಳಾದ ರಾಜೇಶ್ ಪಿ, ಮುರಳಿ ಎಂ. ಎಂಬವರು ಒಳಗೊಂಡಿದ್ದಾರೆ.

Leave a Reply

Your email address will not be published. Required fields are marked *

You cannot copy content of this page