
ಕಾಸರಗೋಡು: ಕಳೆದ ಕೆಲವು ದಿನಗಳಿಂದ ಹೆಚ್ಚುತ್ತಲೇ ಸಾಗಿದ ಚಿನ್ನದ ಬೆಲೆಯಲ್ಲಿ ಇಂದು ಅಲ್ಪ ಇಳಿಕೆ ಉಂಟಾಗಿದೆ. ಇಂದು ಪವನ್ಗೆ 6,640 ರೂ. ಕಡಿಮೆಯಾಗಿ 1,11,120 ರೂ.ಗೆ ತಲುಪಿದೆ. ಅದೇ ರೀತಿ ಗ್ರಾಂಗೆ 830 ರೂ. ಕಡಿಮೆಯಾಗಿ 13,890 ರೂ.ಗೆ ತಲುಪಿದೆ. ಜನವರಿ ೨೯ರಂದು ಕೇರಳದಲ್ಲಿ ಚಿನ್ನಕ್ಕೆ ಸಾರ್ವಕಾಲಿಕ ಬೆಲೆಯೇರಿಕೆಯುಂ ಟಾಗಿತ್ತು. ಅಂದು 1,31,160 ರೂಪಾಯಿಯಂತೆ ಮಾರುಕಟ್ಟೆಯಲ್ಲಿ ಚಿನ್ನ ಮಾರಾಟ ನಡೆದಿದೆ. ಅನಂತರದ ದಿನಗಳಲ್ಲಿ ಚಿನ್ನಕ್ಕೆ ಬೆಲೆ ಇಳಿಮುಖದತ್ತ ಸಾಗಿದೆ.
ತಿರುವನಂತಪುರ: ರಾಜ್ಯದಲ್ಲಿ ಎಸ್ಎಸ್ಎಲ್ಸಿ, ಟಿಎಚ್ಎಸ್ ಎಲ್ಸಿ, ಎಎಚ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 5ರಿಂದ ಆರಂಭಗೊಂಡು 30ರಂದು ಕೊನೆಗೊಳಲಿದೆ. ಎಸ್ಎಸ್ಎಲ್ಸಿ ಐಟಿ ಪರೀಕ್ಷೆಗಳು ಇಂದು ಆರಂಭಗೊಂಡಿದ್ದು 13ರಂದು ಕೊನೆಗೊಳ್ಳಲಿದೆ. ಮೋಡೆಲ್ ಪರೀಕ್ಷೆ 16ರಿಂದ 20ರ ವರೆಗೆ ನಡೆಯಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಎಪ್ರಿಲ್ 7ರಿಂದ 25ರ ವರೆಗೆ ನಡೆಯಲಿದೆ. ಫಲಿತಾಂಶ ಮೇ 8ರಂದು ಘೋಷಿಸುವುದಾಗಿ ಸಚಿವ ವಿ. ಶಿವನ್ ಕುಟ್ಟಿ ತಿಳಿಸಿದ್ದಾರೆ.

ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26)

ತಿರುವನಂತಪುರ: ಕೇರಳ ವಿಧಾನ ಸಭೆಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡು ಇಂದಿಗೆ ಒಂದು ವಾರವಾದರೂ ನೂತನ ಮುಖ್ಯಮಂತ್ರಿ ಯಾರು ಎಂಬುದು ಪ್ರಶ್ನೆಯಾಗಿಯೇ ಮುಂದುವರಿ ಯುತ್ತಿದೆ. ಚುನಾವಣೆಯಲ್ಲಿ ಯುಡಿಎಫ್ಗೆ 102 ಸ್ಥಾನಗಳೊಂದಿಗೆ ಪ್ರಚಂಡ ಬಹುಮತ ಲಭಿಸಿದ್ದರೂ

ಮಂಜೇಶ್ವರ: ಉದ್ಯಾವರ ಮಾಡ ಶ್ರೀ ಅರಸು ಮಂಜೀಷ್ಣಾರ್ ದೈವಕ್ಷೇತ್ರದ ನಿವೃತ್ತ ಮೈಕ್ ಆಪರೇಟರ್ ಜನಾರ್ದನ ಯು. (70) ನಿಧನ ಹೊಂದಿದರು. ಮಂಜಪ್ಪ- ಪೂವಮ್ಮ ದಂಪತಿ ಪುತ್ರನಾಗಿದ್ದಾರೆ. ಎಸ್ಎನ್ಡಿಪಿ, ಮಾಡ ತೀಯಾ ಸಮಾಜದ ಮುಖಂ ಡರಾಗಿದ್ದರು.

ಮಂಜೇಶ್ವರ : ಹೊಳೆಯಿಂದ ಅನಧಿಕೃತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಲಾರಿಯನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಚಾಲಕನನ್ನು ಸೆರೆ ಹಿಡಿದಿದ್ದಾರೆ. ಲಾರಿ ಚಾಲಕ ಮಂಗಳೂರು ಪನೆಲ್ ಪಜೀರ್ ವಂಟೆ ಮಜಲ್ ನಿವಾಸಿ ರಸಾದ್ (18) ಸೆರೆಗೀಡಾದ

ಕಾಸರಗೋಡು: ಮದುವೆ ನಿಶ್ಚಿತಾರ್ಥ ನಡೆದ ಯುವಕ ಬೈಕ್ ಅಪಘಾತದಲ್ಲಿ ಮೃತಪಟ್ಟ ಘಟನೆಯಿಂದ ಮನನೊಂದಿದ್ದ ಯುವತಿ ಮನೆಯೊಳಗೆ ಫ್ಯಾನ್ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಿದೂರು ಕುಂಟಂಗೇರಡ್ಕದ ಬಿ. ಜಯಾನಂದರ ಪುತ್ರಿ ಪ್ರಪುಲ್ಲ (26)

ತಿರುವನಂತಪುರ: ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯದ ಬಗ್ಗೆ ಕಾಂಗ್ರೆಸ್ ಶಾಸಕರ ಅಭಿಪ್ರಾಯಗಳನ್ನೊಳಗೊಂಡ ವರದಿಯನ್ನು ಕಾಂಗ್ರೆಸ್ ಕೇಂದ್ರ ಸಮಿತಿಯ ವೀಕ್ಷಕರಾದ ಅಜಯ್ ಮಾಖಾನ್ ಮತ್ತು ಮುಕುಲ್ ವಾಸ್ನಿಕ್ ಇಂದು ಕಾಂಗ್ರೆಸ್ ಹೈಕಮಾಂಡ್ಗೆ ಸಲ್ಲಿಸುವರು. ಈ ವರದಿಯನ್ನು

ಕೊಲ್ಕತ್ತ: ಪಶ್ಚಿಮಬಂಗಾಳ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಹೊರಬಂದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಯಾನಕ ರಕ್ತಪಾತದ ಅಧ್ಯಾಯ ಆರಂಭಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕುಸಿದಿರುವ ಈ ಸಮಯದಲ್ಲಿ, ಶನಿವಾರದಂದು ಪಶ್ಚಿಮಬಂಗಾಳದ ಹೊಸ ಮುಖ್ಯಮಂತ್ರಿಯಾಗಿ ಸುವೇಂದು

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page