
ವಿದ್ಯಾನಗರ: ಊರಿನಲ್ಲಿ ಉಂಟಾಗಿರುವ ಧೂಳಿನ ಸಮಸ್ಯೆಗೆ ಮೋಕ್ಷ ಉಂಟಾಯಿತು. ಎಸ್ಪಿನಗರ- ಹಿದಾಯತ್ನಗರ- ಕೋಪ ರಸ್ತೆ ಡಾಮರೀಕರಣ ಆರಂಭಗೊಂಡಿತು. ನವೀಕರಣೆಗಾಗಿ ಅಗೆದು ಹಾಕಿದ್ದ ರಸ್ತೆಯ ಕಾಮಗಾರಿ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಧೂಳಿನ ಸಮಸ್ಯೆಯಿಂದ ಜನರಿಗೆ ತೊಂದರೆಯಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯೂ ಪ್ರಕಟಗೊಂಡಿತ್ತು. ಈ ಹಿನ್ನೆಲೆಯಲ್ಲಿ ಈಗ ಡಾಮರೀಕರಣದ ಕೆಲಸ ಆರಂಭಿಸಲಾಗಿದೆ. ವಾಹನಗಳು ಸಾಗುವಾಗ ಏಳುವ ಕಗ್ಗಲ್ಲಿನ ಹುಡಿಯ ಸಮಸ್ಯೆ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ವಾಸಿಸುತ್ತಿದ್ದವರಿಗೆ ಶ್ವಾಸ ಸಮಸ್ಯೆ, ಕಣ್ಣಿನ ಸಮಸ್ಯೆ, ರೋಗಾಣುಬಾಧೆ ಮೊದಲಾದ ಹಲವಾರು ಆರೋಗ್ಯ ಸಮಸ್ಯೆಗಳು ಕಂಡು …
Read more “ಎಸ್ಪಿನಗರ- ಹಿದಾಯತ್ನಗರ ರಸ್ತೆ ನವೀಕರಣೆ: ಧೂಳಿನ ಸಮಸ್ಯೆಗೆ ಪರಿಹಾರ ಡಾಮರೀಕರಣಕ್ಕೆ ಚಾಲನೆ”
ನೀರ್ಚಾಲು: ಗೋವಾದಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ನೀರ್ಚಾಲು ಬಳಿಯ ಮಲ್ಲಡ್ಕ ನಿವಾಸಿ ವಿದ್ಯಾರ್ಥಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಲ್ಲಡ್ಕ ನಿವಾಸಿ ನಿವೃತ್ತ ಶಿಕ್ಷಕ ವೀರೇಶ್ವರ ಕರ್ಮಲ್ಕರ್ ಎಂಬವರ ಪುತ್ರ ಪ್ರಜ್ವಲ್ ಕರ್ಮಲ್ಕರ್ (೨೬) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಗೋವಾದಲ್ಲಿ ಎಂಬಿಎ ವಿದ್ಯಾರ್ಥಿಯಾಗಿದ್ದರು. ಕಳೆದ ಸೋಮವಾರ ಇವರು ಚಲಾಯಿಸಿದ ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಮೃತರು ತಂದೆ, ತಾಯಿ ಅನ್ನಪೂರ್ಣೇಶ್ವರಿ (ಶಿಕ್ಷಕಿ) ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.





ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ಕಾಸರಗೋಡು: ಆನ್ಲೈನ್ ಟ್ರೇಡಿಂಗ್ ಹಾಗೂ ಇತರ ರೀತಿಯ ಆನ್ಲೈನ್ ಸೈಬರ್ ವಂಚಕರಿಗೆ ಬಾಡಿಗೆಗೆ ಬ್ಯಾಂಕ್ ಖಾತೆಗಳನ್ನು ನೀಡುವವರನ್ನು ಪತ್ತೆಹಚ್ಚಲು ಪೊಲೀಸರು ನಿನ್ನೆ ಜಿಲ್ಲೆಯಾದ್ಯಂತ ವ್ಯಾಪಕ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದರಂತೆ ಜಿಲ್ಲೆಯ ವಿವಿಧ

ಉಪ್ಪಳ: ಬೈಕ್ ಹಾಗೂ ಟ್ಯಾಂಕರ್ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪೈವಳಿಕೆ ಚಿಪ್ಪಾರು ಕಡೆಂಕೋಡಿ ಅಡ್ಕತ್ತಿಮಾರ್ನ ಬಾಲಕೃಷ್ಣ ಎಂಬವರ ಪುತ್ರ ಕಿರಣ್ ಕುಮಾರ್

ಬದಿಯಡ್ಕ: ಯುವತಿ ನಾಪತ್ತೆಯಾದ ಬಗ್ಗೆ ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಮಿಸ್ಸಿಂಗ್ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಕುಂಬ್ಡಾಜೆ ಮವ್ವಾರು ವಡಂಬಲ ಹೌಸ್ನ ಹರ್ಷಿತ ವಿ. (18) ಎಂಬಾಕೆ ಸೆ. ೫ರಂದು

ಕಾಸರಗೋಡು: ಮಗಳ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿ ವಿರುದ್ಧ ಪೊಲೀಸರು ಪೋಕ್ಸೋ ಪ್ರಕಾರ ಕೇಸು ದಾಖಲಿಸಿ ಕೊಂಡಿದ್ದಾರೆ. ಸೆಬಾಸ್ಟಿ ಯನ್ ಎಂಬ ವ್ಯಕ್ತಿ ವಿರುದ್ಧ ಚಿಟ್ಟಾರಿಕಲ್ ಠಾಣೆಯಲ್ಲಿ ಕೇಸು ದಾಖಲಿಸಲಾಗಿದೆ. ಆರೋಪಿಯ ಮಗಳು

ತೃಶೂರು: ರಸ್ತೆ ಬದಿ ನಿಲ್ಲಿಸಿದ್ದ ಸರಕು ಲಾರಿಯ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ತಮಿಳುನಾಡಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಎಂಟು ಮಂದಿ ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ತಡರಾತ್ರಿ ತೃಶೂರು ಕೈಪಮಂಗಲ ಪನಂಬಕುನ್ನು ಸೆಂಟರ್ ಬಳಿ

ಶ್ರೀಹರಿಕೋಟ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತೊಂದು ಐತಿಹಾಸಿಕ ಮೈಲುಗಲ್ಲು ಸಾಧಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರ ದಿಂದ ಜಿಎಸ್ಎಲ್ವಿ-ಎಫ್-17 ಆಕಾಶ ನೌಕೆಯು ದೇಶದ ಅತ್ಯಂತ ಭಾರವಾದ ಭೂ ಪರಿವೀಕ್ಷಣಾ ಉಪಗ್ರಹವಾದ

ಢಾಕಾ: ಕಳೆದ ವರ್ಷ ಬಾಂಗ್ಲಾ ದೇಶದಲ್ಲಿ ಶೇಕ್ ಹಸೀನಾರ ವಿರುದ್ಧ ಹಿಂಸಾತ್ಮಕ ದಂಧೆಯನ್ನು ಹುಟ್ಟು ಹಾಕಿ ಆ ಮೂಲಕ ಬಾಂಗ್ಲಾದಲ್ಲಿ ಅಲ್ಲಿನ ಮತೀಯ ಅಲ್ಪಸಂಖ್ಯಾತರು ಮತ್ತು ಶೇಕ್ ಹಸೀನಾ ನೇತೃತ್ವದ ಅವಾಮಿಲೀಗ್ನ ಮೇಲೆ ವ್ಯಾಪಕ

ಎ.ಬಿ. ದಿನೇಶ್ ಬಲ್ಲಾಳ್, ಮುಳ್ಳೇರಿಯ ಅದೊಂದು ಕಾಲವಿತ್ತು. ಮುಳ್ಳೇರಿಯ ಎಯುಪಿ ಶಾಲಾ ಮೈದಾನ ರಾತ್ರಿಯೂ ಕೂಡಾ ಹಗಲಾಗಿ ಪರಿವರ್ತನೆಯಾಗುತ್ತಿತ್ತು. ವಾರದಲ್ಲಿ ನಾಲ್ಕೈದು ಯಕ್ಷಗಾನ ಪ್ರದರ್ಶನವಿರುತ್ತಿತ್ತು. ಇದೇ ರೀತಿ ಜಿಲ್ಲೆಯ ಇತರ ಕಡೆಗಳಲ್ಲೂ ಯಕ್ಷಗಾನ ಪ್ರದರ್ಶನ
You cannot copy contents of this page