ಅನಂತಪುರ ಕ್ಷೇತ್ರದಲ್ಲಿ ಮಕರ ಸಂಭ್ರಮ ೧೭ರಂದು

ಕುಂಬಳೆ: ಅನಂತಪುರ ಕ್ಷೇತ್ರದ ಸರೋವರದಲ್ಲಿ ಇತ್ತೀಚೆಗೆ ಮೊಸಳೆಯೊಂದು ಪ್ರತ್ಯಕ್ಷಗೊಂಡಿದ್ದು, ಈ ಹಿನ್ನೆಲೆಯಲ್ಲಿ ಮಕರ ಸಂಭ್ರಮ ಎಂಬ ಕಾರ್ಯಕ್ರಮವನ್ನು ಈ ತಿಂಗಳ ೧೭ರಂದು ಬೆಳಿಗ್ಗೆ ೧೦ಕ್ಕೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಂದು ಅಪರಾಹ್ನ ೨.೩೦ಕ್ಕೆ ಊರ ಭಕ್ತ ಜನರ ಸಮಾಲೋಚನಾ ಸಭೆ ನಡೆಯಲಿದ್ದು, ಎರಡೂ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕ್ಷೇತ್ರದ ಕಾರ್ಯನಿರ್ವಹಣಾಧಿಕಾರಿ ರಮಾನಾಥ ಶೆಟ್ಟಿ ವಿನಂತಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page