ಅಬಕಾರಿ ದಾಳಿ: ಕರ್ನಾಟಕ ಮದ್ಯ, ಬಿಯರ್ ಸಹಿತ ಇಬ್ಬರ ಸೆರೆ

ಕಾಸರಗೋಡು: ಅಬಕಾರಿ ತಂಡ ಎರಡೆಡೆಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಕರ್ನಾಟಕ ಮದ್ಯ ಮತ್ತು ಬಿಯರ್ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ. ಕಾಸರಗೋಡು ಎಕ್ಸೈಸ್ ಸರ್ಕಲ್ ಕಚೇರಿಯ ಸರ್ಕಲ್ ಇನ್ಸ್‌ಪೆಕ್ಟರ್ ಅರುಣ್ ಡಿ.ಯವರ ನೇತೃತ್ವದ ಅಬಕಾರಿ ತಂಡ ಪೆರ್ಲಕ್ಕೆ ಸಮೀಪದ ಶೇಣಿಯಲ್ಲಿ ನಡೆಸಿದ ಕಾರ್ಯಾಚರಣೆ ಯಲ್ಲಿ ಸ್ಕೂಟರ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.32 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಶೇಣಿ, ಗೋಳಿತ್ತಡ್ಕದ ಹರೀಶ್ ಅಲಿಯಾಸ್ ಶಶಿಧರ (37) ಎಂಬಾತನನ್ನು ಅಬಕಾರಿ ತಂಡ ಬಂಧಿಸಿದೆ. ಬದಿಯಡ್ಕ ಅಬಕಾರಿ ಕಚೇರಿಗೆ ಹಸ್ತಾಂತರಿಸಿ ಕೇಸು ದಾಖಲಿಸಲಾಗಿದೆ. ಎ.ಇ.ಒ (ಗ್ರೇಡ್) ಜನಾರ್ದನನ್, ಪ್ರಿವೆಂಟಿವ್ ಆಫೀಸರ್ (ಗ್ರೇಡ್) ರಮೇಶನ್, ಸಿಇಒ ಮೋಹನ್ ಕುಮಾರ್, ಕೆ. ಮು ವಿಭಾಗದ ಪಿ.ಒ. ಮಂಜುನಾಥ ಆಳ್ವ, ಸಿಇಒಗಳಾದ ಪ್ರಸನ್ನ ಕುಮಾರ್ ಮತ್ತು ಸುಭಿನ್ ಪಿಲಿಪ್ಸ್ ಎಂಬವರು ಈ ಅಬಕಾರಿ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.

ಇನ್ನೊಂದೆಡೆ ಕೊಪಾಡಿ ನಾಕಾಪು ಎಂಬಲ್ಲಿ ಕಾಸರಗೋಡು ಅಬಕಾರಿ ಸರ್ಕಲ್ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಜನಾರ್ದನನ್‌ರ ನೇತೃ-ತ್ವದ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಸಾಗಿಸಲಾಗುತ್ತಿದ್ದ 13 ಲೀಟರ್ ಬಿಯ ರನ್ನು ಪತ್ತೆಹಚ್ಚಿ ವಶಪಡಿಸಿಕೊಂಡು ಕುಂಬಳೆ ಅಬಕಾರಿ ರೇಂಜ್ ಕಚೇರಿಗೆ ಹಸ್ತಾಂತರಿಸಲಾಗಿದೆ. ಇದಕ್ಕೆ ಸಂಬಂ ಧಿಸಿ ಕೊಪಾಡಿ ಕಂಚಿಕಟ್ಟೆಯ ಅರುಣ್ ಶರ್ಮಾ (34) ಎಂಬಾತನನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page