ಆಂಧ್ರ ಪ್ರದೇಶ: ದೇವಸ್ಥಾನದ ಉತ್ಸವ ವೇಳೆ ಗೋಡೆ ಕುಸಿದು ೮ ಭಕ್ತರು ಸಾವು:ಹಲವರಿಗೆ ಗಂಭೀರ
ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟದ ಶ್ರೀ ವರಾಹ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಚಂದನೋತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ 20 ಅಡಿ ಉದ್ದದ ಗೋಡೆ ಭಾರೀ ಮಳೆಗೆ ಕುಸಿದುಬಿದ್ದು 8 ಮಂದಿ ಭಕ್ತರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯಲ್ಲಿ ದಾಖಲಿ ಸಲಾಗಿದೆ. ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್ನಿಂದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ದುರಂತಕ್ಕೆ ಪ್ರಧಾನಿ ನರೇಂದ್ರಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ ೨ ಲಕ್ಷರೂ.ನಂತೆ ನಷ್ಟ ಪರಿಹಾರ ಘೋಷಿಸಿದ್ದಾರೆ.