ಇಲಿ ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತ್ಯು
ಕಾಸರಗೋಡು: ಇಲಿ ವಿಷ ಸೇವಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟರು. ಮಡಿಕೈ ಚಾಳಕ್ಕಡವ್ ಅಂಬಾಡಿ ನಿಲಯ ನಿವಾಸಿ ಅಶೋಕನ್ -ರಜನಿ ದಂಪತಿ ಪುತ್ರ ಎನ್.ಆರ್. ರಂಜಿತ್ (21) ಮೃತಪಟ್ಟವರು.
ಈ ತಿಂಗಳ ೬ರಂದು ರಂಜಿತ್ರನ್ನು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿತ್ತು. ವಿಷ ಹೊಟ್ಟೆಗೆ ಸೇರಿದ ಹಿನ್ನೆಲೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಇವರು ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂದು ಸ್ಪಷ್ಟಗೊಂಡಿಲ್ಲ. ನೀಲೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.