ಉದ್ಯಾವರ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದ ನೂತನ ಪ್ರಧಾನ ಮಹಾದ್ವಾರ ಲೋಕಾರ್ಪಣೆ
ಮಂಜೇಶ್ವರ: ಉದ್ಯಾವರ ಶ್ರೀ ಅರಸು ಮಂಜೀಷ್ಣಾರ್ ದೈವಗಳ ಕ್ಷೇತ್ರದಲ್ಲಿ ಸುಮಾರು 11 ಲಕ್ಷ ರೂಪಾಯಿ ಮೊತ್ತದಲ್ಲಿ ನೂತನವಾಗಿ ನಿರ್ಮಿಸಿದ ಪ್ರಧಾನ ಮಹಾದ್ವಾರದ ಉದ್ಘಾಟನೆ ಹಾಗೂ ಕಾಣಿಕೆ ಡಬ್ಬಿ ಮತ್ತು ನೂತನ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ನಿನ್ನೆ ಬೆಳಗ್ಗೆ ನಡೆಯಿತು. ಬಡಾಜೆ ಬೂಡು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿ ದೀಪ ಬೆಳಗಿಸಿದರು. ಕೇರಳ ಮಲಬಾರ್ ದೇವಸ್ವಂ ಮಂಡಳಿಯ ಆಯುಕ್ತÀ ಟಿ.ಸಿ. ಬಿಜು ಉದ್ಘಾಟಿಸಿದರು. ಈ ವೇಳೆ ಕ್ಷೇತ್ರದ ಅರ್ಚಕರು, ಆಚಾರ ಪಟ್ಟವರು, ಗುರಿಕಾರರು ಮತ್ತು ಹತ್ತು ಸಮಸ್ತರು ಉಪಸ್ಥಿತರಿದ್ದರು. ಬಳಿಕ ನಡೆದ ಸಭೆಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ಕಿರಣ್ ಕುಮಾರ್ ಶೆಟ್ಟಿ ಮಾಡ ಅಧ್ಯಕ್ಷತೆ ವಹಿಸಿದ್ದರು. ಕಾಸರಗೋಡು ವಿಭಾಗ ಮಲಬಾರ್ ದೇವಸ್ವಂ ಮಂಡಳಿಯ ಸಹಾಯಕ ಆಯುಕ್ತ ಕೆ.ಪಿ. ಪ್ರದೀಪ್ ಕುಮಾರ್, ಮಹಾಧ್ವಾರದ ದಾನಿ ಕೇಶವ ಶಂಕರ ಆಳ್ವ ಕೊಳಕೆಗುತ್ತು, ಮೋಹಿತ್ ಕೇಶವ್ ಆಳ್ವ, ಸಂಬAಧಿಕರಾದ ವಿಠಲ್ ಆಳ್ವ, ಸಂಕಪ್ಪ ಆಳ್ವ, ಆಡಳಿತ ಮಂಡಳಿ ಸದಸ್ಯರಾದ ಯೋಗೀಶ್ ಕುಂಜ ತ್ತೂರು, ಸದಾಶಿವ ಶೆಟ್ಟಿ, ಕರುಣಾಕರ ಶೆಟ್ಟಿ ಶುಭಾಶಂಸನೆಗೈದರು. ಈ ವೇಳೆ ಮಹಾದ್ವಾರದ ಸೇವಾಕರ್ತೃ, ದ್ವಾರ ನಿರ್ಮಾಣದಲ್ಲಿ ತೊಡಗಿಸಿದವರನ್ನು, ವಿವಿಧ ಕಾರ್ಯಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರನ್ನು ಗೌರವಿಸಲಾ ಯಿತು. ಕ್ಷೇತ್ರ ಕಾರ್ಯನಿರ್ವಹಣಾ ಅಧಿಕಾರಿ ಕೆ.ಪಿ. ಸುನಿಲ್ ಕುಮಾರ್ ಸ್ವಾಗತಿಸಿ, ಉತ್ಸವ ಸಮಿತಿ ಅಧ್ಯಕ್ಷ ಹರೀಶ್ ಶೆಟ್ಟಿ ಮಾಡ ನಿರೂಪಿಸಿದರು. ಆಡಳಿತ ಮಂಡಳಿ ಸದಸ್ಯ ದಯಾಕರ ಮಾಡ ವಂದಿಸಿದರು.
ಕ್ಷೇತ್ರದ ವಾರ್ಷಿಕ ಬಂಡಿ ಮಹೋತ್ಸವ ಇಂದಿನಿAದ: ಕ್ಷೇತ್ರದ ವಾರ್ಷಿಕ ಉತ್ಸವ ಹಾಗೂ ಐತಿಹಾಸಿಕ ಬಂಡಿ ಮಹೋತ್ಸವ ಇಂದಿನಿAದ 14ರ ವರೆಗೆ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ. ಇಂದು ರಾತ್ರಿ 8 ಕ್ಕೆ ತಾಲೀಮು ಪ್ರದರ್ಶನ, 9ಕ್ಕೆ ಧ್ವಜಾರೋಹಣ, 10 ಕ್ಕೆ ಕಂಚಿಲ ಸೇವೆ, ಕಟ್ಟೆದೀಪಾರಾಧನೆ, 9 ರಂದು ಸಂಜೆ 5.30 ಕ್ಕೆ ಯಕ್ಷಗಾನ ತಾಳ ಮದ್ದಳೆ, ರಾತ್ರಿ 9 ಕ್ಕೆ ಸಂಗೀತ ರಸಮಂಜರಿ ಬಳಿಕ 1 ರಿಂದ ಕೊಟ್ಯದಾಯನ ಅಣ್ಣ ದೈವದ ನೇಮ, ಕೆರೆ ದೀಪಾರಾಧನೆ, 10ರಂದು ಬೆಳಿಗ್ಗೆ 9ಕ್ಕೆ ತಮ್ಮ ದೈವದ ನೇಮ, ಮಧ್ಯಾಹ್ನ 12.30ಕ್ಕೆ ಮಡೆಸ್ಥಾನ, ಸಂಜೆ 4.30ಕ್ಕೆ ಮುಂಡತ್ತಾಯ ದೈವದ ನೇಮ, ರಾತ್ರಿ 7ಕ್ಕೆ ನಡುಬಂಡಿ ಉತ್ಸವ, ಅಣ್ಣ ದೈವದ ನೇಮ, 11ರಂದು ಬೆಳಿಗ್ಗೆ 10ಕ್ಕೆ ತಮ್ಮ ದೈವದ ನೇಮ, ಸಂಜೆ 4 ಕ್ಕೆ ಮುಂಡತ್ತಾಯ ದೈವದ ನೇಮ, 6.30ಕ್ಕೆ ಕಡೆಬಂಡಿ ಉತ್ಸವ, ತಮ್ಮ ದೈವದ ನೇಮ, ಸುಡುಮದ್ದು ಪ್ರದರ್ಶನ, 14 ರಂದು ರಾತ್ರಿ 10ಕ್ಕೆ ಧ್ವಜಾವರೋಹಣ ನಡೆಯಲಿದೆ.