ಒಂದು ದೇಶ ಒಂದು ಚುನಾವಣೆ ಪ್ರಸ್ತಾವನೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ವಿಧಾನಸಭೆ

ತಿರುವಂತಪುರ: ಒಂದು ದೇಶ ಒಂದು ಚುನಾವಣೆ  ಸಂವಿಧಾನಬಾಹಿ ರವಾದ ಕೇಂದ್ರ ಸರಕಾರದ ಕ್ರಮವಾಗಿದೆಯೆಂದೂ ಅದನ್ನು ವಿಧಾನಸಭೆ    ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ. ಮತ್ತು ಅದನ್ನು ಜ್ಯಾರಿಗೊಳಿಸದಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದೆ. ಈ ನಿರ್ಣಯವನ್ನು  ಮುಖ್ಯಮಂತ್ರಿಗಳ ಪರವಾಗಿ ವಿಧಾನಸಭೆಯಲ್ಲಿ ಸಚಿವ ಎಂ.ಬಿ. ರಾಜೇಶ್ ವಿಧಾನಸಭೆಯಲ್ಲಿ ಮಂಡಿಸಿದರು. ಅದನ್ನು ವಿಧಾನಸಭೆ  ಸರ್ವಾನುಮತದಿಂದ ಅಂಗೀಕರಿಸಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ಮತ್ತು ಸಾಂವಿಧಾನಿಕ ಮೌಲ್ಯಗಳ ವಿರುದ್ಧವಾಗಿದೆ ಮಾತ್ರವಲ್ಲ ಸಂಸದೀಯ ಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಎಂದು ನಿರ್ಣಯದಲ್ಲಿ ಹೇಳಲಾಗಿದೆ.  ಈ ಪ್ರಸ್ತಾವನ್ನೆಯನ್ನು ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ರಾಜಕೀಯ ವೈವಿಧ್ಯತೆಯನ್ನು ನಾಶಮಾಡುವ ಕೆಟ್ಟ ತಂತ್ರವೆಂದು ಪರಿಗಣಿಸಲಾಗಿದೆಯೆಂದು  ನಿರ್ಣಯ ಹೇಳಿದೆ.

Leave a Reply

Your email address will not be published. Required fields are marked *

You cannot copy content of this page