ಕಣಿಪುರ ಕ್ಷೇತ್ರ: ಶೀಟು ಹಾಸಿದ ಮೇಲ್ಛಾವಣಿ ಸಮರ್ಪಣೆ

ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ತೀರ್ಥ ಕೆರೆಯ ಮುಂಭಾಗದಲ್ಲಿ ಭಕ್ತರಿಗೆ ಅನುಕೂಲವಾಗುವಂತೆ ಬೆಡಿ ಮಹೋತ್ಸವ ಸ್ವಯಂಸೇವಾ ಸಮಿತಿ ವತಿಯಿಂದ ನಿರ್ಮಿಸಿದ ಶೀಟು ಹಾಕಿದ ಮೇಲ್ಛಾವಣಿ ಕಾಮಗಾರಿ ಪೂರ್ಣಗೊಳಿಸಲಾಗಿದ್ದು, ಅದನ್ನು ದೇವರಿಗೆ ಸಮರ್ಪಿಸಲಾಯಿತು. ಕ್ಷೇತ್ರ ಅರ್ಚಕ ಗೋಪಾಲಕೃಷ್ಣ ಅಡಿಗ ಪ್ರಾರ್ಥನೆ ಸಲ್ಲಿಸಿದರು. ಸಮಿತಿಯ ಅಧ್ಯಕ್ಷ ನ್ಯಾಯವಾದಿ ಸದಾನಂದ ಕೆ. ಕಾಮತ್ ಸಹಿತ ಹಲವರು ಉಪಸ್ಥಿತರಿದ್ದರು.

You cannot copy contents of this page