ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಕಾಸರಗೋಡು: ಬೇಳ ಗ್ರಾಮದ ಮಾನ್ಯದಲ್ಲಿ ಕಾಸರಗೋಡು ಅಬಕಾರಿ ರೇಂಜ್ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಆಫೀಸರ್ ಜೋಸೆಫ್‌ರ ನೇತೃತ್ವದ ಅಬಕಾರಿ ತಂಡ ನಿನ್ನೆ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಕರ್ನಾಟಕ ನಿರ್ಮಿತ ೬.೮೪೦ ಲೀಟರ್ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಪಳ್ಳವೀಟಿಲ್ ಅಬ್ದುಲ್ ಸನಾಫ್ (೧೯) ಎಂಬಾತನನ್ನು ಬಂಧಿಸಲಾಗಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ನಂತರ ಆತನನ್ನು ನ್ಯಾಯಾಲಯದ ನಿರ್ದೇಶ ಪ್ರಕಾರ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

Leave a Reply

Your email address will not be published. Required fields are marked *

You cannot copy content of this page