ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಕಾಸರಗೋಡು:  ಕಾಸರಗೋಡು ಅಬಕಾರಿ ರೇಂಜ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಜೋಸೆಫ್   ಜೆ.ಯು ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 1.620 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ಸಂಬಂಧ ನೆಲ್ಕಳದ ಸಂತೋಷ್ ಕೆ 36) ಎಂಬಾತನನ್ನು ಬಂಧಿಸಿ, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಎ.ವಿ ರಾಜೀವನ್, ಸಿಇಒಗಳಾದ ಬಾಬು, ಚಾಲಕ  ಸುಮೋದ್ ಕುಮಾರ್ ಎಂಬವರು ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page