ಕರ್ನಾಟಕ ಮದ್ಯ ವಶ: ಓರ್ವ ಸೆರೆ
ಉಪ್ಪಳ: ಉಪ್ಪಳ ಸಮೀಪದ ಪುಳಿಕುತ್ತಿಯಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆ ಯಲ್ಲಿ ಆರು ಲೀಟರ್ ಕರ್ನಾಟಕ ಬಿಯರ್ ಮತ್ತು 3.06 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಪುಳಿಕುತ್ತಿಯ ರಮೇಶ್ ಪಿ (42) ಎಂಬಾತನನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ.
ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್ನ ಅಸಿಸ್ಟೆಂಟ್ ಇನ್ಸ್ಪೆಕ್ಟರ್ (ಗ್ರೇಡ್) ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್) ಸಿ.ಕೆ.ವಿ ಸುರೇಶ್, ಪ್ರಿವೆಂಟೀವ್ ಆಫೀಸರ್ (ಗ್ರೇಡ್) ಪ್ರಜಿತ್ ಕೆ.ಆರ್, ಸಿಇಒ ಅಶ್ವತಿ ಮತ್ತು ಚಾಲಕ ಸಜೀಶ್ ಎಂಬವರನ್ನೊಳಗೊಂಡ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ.