ಕಾವೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸಾಹಿತಿ ವಿರಾಜ್ ಅಡೂರುರಿಗೆ ಗಡಿನಾಡ ಚೈತನ್ಯ ಪ್ರಶಸ್ತಿ ಪ್ರದಾನ
ಮಂಜೇಶ್ವರ: ಸಾಹಿತಿ, ಪತ್ರಕರ್ತ ಹೀಗೆ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ವಿರಾಜ್ ಅಡೂರುರಿಗೆ ಗಡಿನಾಡ ಚೈತನ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ವತಿಯಿಂದ ವರ್ಕಾಡಿ ಕಾವಿ ಸುಬ್ರಹ್ಮಣ್ಯ ಕ್ಷೇತ್ರದ ಬ್ರಹ್ಮಕಲಶದ ಸಂದರ್ಭದಲ್ಲಿ ನಡೆದ ಸಾಹಿತ್ಯ ಗಾನ ನೃತ್ಯ ವೈಭವ ಕಾರ್ಯಕ್ರಮದಲ್ಲಿ ವಿರಾಜ್ ಅಡೂರು ಅವರ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಘದ ಅಧ್ಯಕ್ಷೆ ವಾಣಿಶ್ರೀ ಕಾಸರಗೋಡು, ಕಾರ್ಯದರ್ಶಿ ಗುರುರಾಜ್ ಕಾಸರಗೋಡು, ಜಯಂತಿ ಪಿ ರಾಜ್, ಆದ್ಯಂತ್ ಅಡೂರು, ಉಷಾ ಸುಧಾಕರನ್, ವಿದುಷಿ ರೇಖಾ ದಿನೇಶ್ ಮಂಜೇಶ್ವರ, ಕಾವಿ ಸುಬ್ರಹ್ಮಣ್ಯ ಕ್ಷೇತ್ರದ ಆಡಳಿತ ಮಂಡಳಿಯ ಮುಖಂಡ ಪ್ರಭಾಕರ ರೈ, ವಿಕ್ರಂ ದತ್ತ, ಡಾ. ಶಂಕರ್ ಕೆ ಎಸ್ ಉಪಸ್ಥಿತರಿದ್ದರು.