ಕುಂಜತ್ತೂರು: ಆಟೋ ಚಾಲಕನನ್ನು ಇರಿದು ಕೊಲೆಗೈಯ್ಯಲು ಬಳಸಿದ ಚಾಕು ಬಾವಿಯಲ್ಲಿ ಪತ್ತೆ
ಮಂಜೇಶ್ವರ: ಮಂಗಳೂರು ಮುಲ್ಕಿ ಬಳಿಯ ಕೊಲ್ನಾಡು ನಿವಾ ಸಿಯೂ ಮಂಗಳೂರಿನಲ್ಲಿ ಆಟೋ ಚಾಲಕನಾಗಿದ್ದ ಮೊಹಮ್ಮದ್ ಶರೀಫ್ (52) ಎಂಬವರನ್ನು ಕೊಲೆಗೈಯ್ಯಲು ಬಳಸಿದ ಚಾಕುವನ್ನು ಕುಂಜತ್ತೂರು ಬಳಿಯ ಅಡ್ಕಪ್ಪಳ್ಳ ಮಾನಿಗುಡ್ಡೆ ಎಂಬಲ್ಲಿನ ಬಾವಿಯಲ್ಲಿ ಪತ್ತೆಹಚ್ಚಲಾಗಿದೆ.
ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸೆರೆಗೀಡಾಗಿ ರಿಮಾಂ ಡ್ನಲ್ಲಿದ್ದ ಸುರತ್ಕಲ್ ಬಳಿಯ ಕಲ್ಲಾಪುವಿನ ಅಭಿಷೇಕ್ ಶೆಟ್ಟಿ (25)ಯನ್ನು ಪೊಲೀಸರು ಕಸ್ಟಡಿಗೆ ತೆಗೆದು ತನಿಖೆಗೊಳಪಡಿಸಿದಾಗ ಕೊಲೆಗೆ ಬಳಸಿದ ಚಾಕುವನ್ನು ಮಾನಿಗುಡ್ಡೆಯಲ್ಲಿರುವ ಬಾವಿಗೆ ಎಸೆದಿರುವುದಾಗಿ ಹೇಳಿಕೆ ನೀಡಿದ್ದನು. ಈ ಹಿನ್ನೆಲೆಯಲ್ಲಿ ನಿನ್ನೆ ಉಪ್ಪಳ ಅಗ್ನಿಶಾಮಕದಳದ ಸಹಾಯದೊಂದಿಗೆ ನಡೆಸಿದ ತಪಾಸಣೆ ವೇಳೆ ಚಾಕು ಬಾವಿಯಲ್ಲಿ ಪತ್ತೆಯಾಗಿದೆ.
ಎಪ್ರಿಲ್ ೧೦ರಂದು ಇ. ಅನೂಪ್ ಕುಮಾರ್ ನೇತೃತ್ವದಲ್ಲಿ ನಡೆಸಿದ ತನಿಖೆಯಲ್ಲಿ ಆರೋಪಿ ಯನ್ನು ಬಂಧಿಸಲಾಗಿತ್ತು.