ಕ್ಷೇತ್ರ ಕಳವು ಆರೋಪಿಗಳ ಪತ್ತೆಗೆ ಬಿಜೆಪಿ ಒತ್ತಾಯ

ಮಂಜೇಶ್ವರ: ಕೋಳ್ಯೂರು ಶ್ರೀ ಶಂಕರನಾರಾಯಣ ಕ್ಷೇತ್ರದಲ್ಲಿ ನಡೆದ ಕಳವು ಪ್ರಕರಣದಲ್ಲಿ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆAದು ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ಅಗ್ರಹಿಸಿದೆ ಐತಿಹಾಸಿವಾದ ಕ್ಷೇತ್ರವನ್ನು ಅಪವಿತ್ರಗೊಳಿಸಿ ದೇವಸ್ಥಾನದ ಸೊತ್ತುಗಳನ್ನು ದೋಚುವ ಪ್ರಯತ್ನ ಮಾತ್ರವಲ್ಲ ಇದು ಹಿಂದೂಗಳ ಧಾರ್ಮಿಕ ನಂಬಿಕೆಗೆ ಸವಾಲು ಎಂದು ಬಿಜೆಪಿ ಹೇಳಿದೆ. ಪೊಲೀಸರು ನ್ಘಿರ್ಕಿಯತೆ ಎದ್ದು ಕಾಣುತ್ತಿದೆ. ಆರೋಪಿಗಳ ಪತ್ತೆ ಗಾಗಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಿಜಿಪಿ ಇಲಾಖೆಗೆ ಅಗ್ರಹಿಸಿದೆ.ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ, ದರೋಡೆ ಪ್ರಕರಣ ಅಧಿಕ ವಾಗುತ್ತಿದೆ. ಇದುವರೆಗೆ ನಡೆದ ಯಾವುದೇ ಪ್ರಕರಣದಲ್ಲಿ ಆರೋಪಿಗಳನ್ನು ಪೊಲೀಸ್ ಬಂಧಿಸಿಲ್ಲ ಎಂದು ಆರೋಪಿಸಿದೆ. ದೇವಸ್ಥಾನ ಕಳವು ಕ್ಷೇತ್ರಕ್ಕೆ ಬಿಜೆಪಿ ರಾಜ್ಯ ಕಾರ್ಯದರ್ಶಿ ನ್ಯಾ. ಶ್ರೀಕಾಂತ್,ವಿಜಯ ಕುಮಾರ್ ರೈ, ಆದರ್ಶ ಬಿ ಎಂ,ಮಣಿಕAಠ ರೈ ಪದ್ಮನಾಭ ರೈ ಮಿಂಜ, ಸಂತೋಷ ದೈಗೋಳಿ ಕೆ.ವಿ ಭಟ್, ನಾರಾಯಣ ತುಂಗಾ ಮೊದಲಾದವರು ಬೇಟಿ ನೀಡಿದರು.

Leave a Reply

Your email address will not be published. Required fields are marked *

You cannot copy content of this page