ಗಡಿನಾಡ ಸಾಹಿತ್ಯ ಅಕಾಡೆಮಿಯ ಕನ್ನಡ ರಾಜ್ಯೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಆಶ್ರಯದಲ್ಲಿ ನಡೆಯಲಿರುವ ಕಾಸರಗೋಡು ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಸಚಿವೆ ವೀಣಾ ಜೋರ್ಜ್ ಬಿಡುಗಡೆಗೊಳಿ ಸಿದರು. ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಶಾಸಕ ಎನ್.ಎ. ನೆಲ್ಲಿಕುನ್ನು, ಎ.ಆರ್. ಸುಬ್ಬಯ್ಯಕಟ್ಟೆ, ಅಖಿಲೇಶ್ ನಗುಮುಗಂ, ಚನಿಯಪ್ಪ ನಾಯ್ಕ್, ಮನು ಪಣಿಕ್ಕರ್, ಶ್ರೀನಾಥ್, ರವಿ ನಾಯ್ಕಾಪು, ಥೋಮಸ್ ಡಿಸೋಜಾ, ವಾಮನ್ ರಾವ್ ಬೇಕಲ್, ಸಂಧ್ಯಾರಾಣಿ ಉಪಸ್ಥಿತರಿದ್ದರು.

ಬಾಯಾರು ಪ್ರಶಾಂತಿ ವಿದ್ಯಾಲಯದಲ್ಲಿ ಈ ತಿಂಗಳ ೧೯ರಂದು ಕಾರ್ಯಕ್ರಮ ನಡೆಯಲಿದೆ.

You cannot copy contents of this page