ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆಯಿಂದ
ಅಂಗಡಿಮೊಗರು: ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಳೆ ಆರಂಭಗೊಂಡು ಈ ತಿಂಗಳ 12ರವರೆಗೆ ವಿವಿಧ ಕಾರ್ಯ ಕ್ರಮಗಳೊಂದಿಗೆ ನಡೆಯಲಿದೆ. ನಾಳೆ ಬೆಳಿಗ್ಗೆ 8 ಗಂಟೆಗೆ ಉಗ್ರಾಣ ಮುಹೂರ್ತ ಬಳಿಕ ಮಲ್ಲ ಕ್ಷೇತ್ರದ ಆಡಳಿತ ಮೊಕ್ತೇಸರ ಆನೆಮಜಲು ಸತ್ಯನಾರಾಯಣ ಭಟ್ರಿಂದ ದೀಪ ಪ್ರಜ್ವಲನೆ, ಮದ್ಯಾಹ್ನ ಮಹಾಪೂಜೆ, ಸಂಜೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ವಿವಿಧ ವೈದಿಕ ಕಾರ್ಯಕ್ರಮಗಳ ಜೊತೆಗೆ ರಾತ್ರಿ ೭ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಜರಗಲಿದೆ.