ನಯಬಜಾರ್ ಲಯನ್ಸ್ ಕ್ಲಬ್‌ನಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ

ಉಪ್ಪಳ: ಶ್ರೀ ಕ್ಷೇತ್ರç ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಮಂಜೇಶ್ವರ, ಲಯನ್ಸ್ ಕ್ಲಬ್ ಮಂಜೇಶ್ವರ ಉಪ್ಪಳ, ಶ್ರೀ ಭಾರತೀ ನೇತ್ರ ಚಿಕಿತ್ಸಾಲಯ ಮುಜುಂಗಾವು, ಕಾಸರಗೋಡು ಜಿಲ್ಲಾ ಅಂಧತ್ವ ನಿವಾರಣ ಸಮಿತಿ ಇವರ ಆಶ್ರಯದಲ್ಲಿ ತಲಪಾಡಿ ವಲಯದ ದುರ್ಗಾ ಪರಮೇಶ್ವರಿ ಜ್ಞಾನ ವಿಕಾಸ ಕೇಂದ್ರ ಮತ್ತು ಪ್ರಗತಿಬಂಧು ಪೈ-ಸಹಾಯ ಸಂಘಗಳ ಒಕ್ಕೂಟ ಇದರ ಸಹಯೋಗದೊಂದಿಗೆ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಉಚಿತ ಕಣ್ಣಿನ ಪೊರೆ ತಪಾಸಣೆ ಶಿಬಿರ ನಯಾಬಜಾರ್ ಲಯನ್ಸ್ ಸೇವಾ ಮಂದಿರದಲ್ಲಿ ನಡೆ ಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ÷್ಮಣ ಕುಂಬಳೆ ಅಧ್ಯಕ್ಷತೆ ವಹಿಸಿದರು. ಜನಜಾಗೃತಿ ವೇದಿಕೆ ಜಿಲ್ಲಾ ಸ್ಥಾಪಕಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಶ್ರೀ ಭಾರತೀ ನೇತ್ರ ಚಿಕಿತ್ಸಾಲಯದ ಆಡಳಿತಾಧಿಕಾರಿ ಡಾ| ಎಂ. ಶ್ರೀಧರ ಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ ಮಂಜೇಶ್ವರ ಯೋಜನಾಧಿಕಾರಿ ಶಶಿಕಲಾ ಸುವರ್ಣ, ಲಯನ್ಸ್ ಕ್ಲಬ್ ಕಾರ್ಯದರ್ಶಿ ಅಶೋಕ್, ಜನಜಾಗೃತಿ ವೇದಿಕೆಯ ಮುಖಂಡರಾದ ಹರೀಶ್ ಶೆಟ್ಟಿ ಕಡಂಬಾರ್, ಹರೀಶ್ ಶೆಟ್ಟಿ ಮಾಡ, ಧರ್ಮಸ್ಥಳ ಭಜನಾ ಪರಿಷತ್ ಮಂಜೇಶ್ವರ ತಾಲೂಕು ಅಧ್ಯಕ್ಷ ದಿನೇಶ್ ಚೆರುಗೋಳಿ, ಮಂಜೇಶ್ವರ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಉದಯ ಕುಮಾರ್, ನೇತ್ರ ತಜ್ಞ ಆನಂದ್ ಎಸ್. ಹಂಡಿ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಕೋಶಾಧಿಕಾರಿ ಕಮಲಾಕ್ಷ ಕೆ ಪಂಜ ವಂದಿಸಿದರು.

Leave a Reply

Your email address will not be published. Required fields are marked *

You cannot copy content of this page