ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರ ಸೇವಾ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

ನಾರಂಪಾಡಿ: ನಾರಂ ಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಮುಂದಿನ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ತೀರ್ಮಾ ನಿಸಲು ಸುಬ್ರಹ್ಮಣ್ಯ ಭಟ್ ತಲೇಕ ಅವರ ಅಧ್ಯಕ್ಷತೆ ಯಲ್ಲಿ ಮಹಾಸಭೆ ಜರಗಿತು. ಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿ ರೂಪೀಕರಿಸಲಾಯಿತು. ಗೌರವಾಧ್ಯಕ್ಷರಾಗಿ ದಾನಮಾರ್ತಾಂಡ ವರ್ಮ ರಾಜ ಯಾನೆ ರಾಮಂತರಸುಗಳು ಮಾಯಿಪ್ಪಾಡಿ (ಆನುವಂಶಿಕ ಮೊಕ್ತೇಸರರು), ಅಧ್ಯಕ್ಷರಾಗಿ ಬಾಲಕೃಷ್ಣ ಮಾಸ್ತರ್ ನಾರಂಪಾಡಿ, ಉಪಾಧ್ಯಕ್ಷರಾಗಿ ಸೀತಾರಾಮ ರಾವ್ ಪಿಲಿಕೂಡ್ಲು, ಪದ್ಮನಾಭ ಮಣಿಯಾಣಿ ನಾರಂಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಹರಿನಾರಾಯಣ ಮಾಸ್ತರ್ ಶಿರಂತಡ್ಕ, ಕಾರ್ಯದರ್ಶಿಯಾಗಿ ಹರೀಶ್ ನಾರಂಪಾಡಿ, ದೇವರಾಜ್ ಭಂಡಾರಿ ನಾರಂಪಾಡಿ, ಕೋಶಾಧಿಕಾರಿಯಾಗಿ ಕೃಷ್ಣಮೂರ್ತಿ ಎಡೆಪ್ಪಾಡಿ ಹಾಗೂ 14 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಕೃಷ್ಣಮೂರ್ತಿ ಎಡೆಪ್ಪಾಡಿ ಸ್ವಾಗತಿಸಿ, ಗೋಪಾಲ ಮುಂಡೋಳುಮೂಲೆ ವಂದಿಸಿದರು.

RELATED NEWS

You cannot copy contents of this page