ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರ ಬ್ರಹ್ಮಕಲಶಾಭಿಷೇಕ ಸಮಿತಿಯಿಂದ ಎಡನೀರು ಶ್ರೀಗಳ ಭೇಟಿ

ಬದಿಯಡ್ಕ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆಯುವ ಪುನ:ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರದ ಬ್ರಹ್ಮಕಲಶಾಭಿಷೇಕ ಸಮಿತಿ ನೇತೃತ್ವದಲ್ಲಿ ನಿನ್ನೆ ಎಡನೀರು ಮಠಕ್ಕೆ ಭೇಟಿ ನೀಡಿ ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ಪುನ:ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ ಬದಿಯಡ್ಕ, ಸೇವಾ ಸಮಿತಿ ಅಧ್ಯಕ್ಷ ತಲೇಕ ಸುಬ್ರಹ್ಮಣ್ಯ ಭಟ್, ಬ್ರಹ್ಮಕಲಶಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಮಾಸ್ಟರ್ ನಾರಂಪಾಡಿ, ಕೋಶಾಧಿಕಾರಿ ಸೀತಾರಾಮ ಕುಂಜತ್ತಾಯ, ಉಪಾಧ್ಯಕ್ಷ ಕುಂಞÂ ರಾಮ ಗೋಸಾಡ, ಕಾರ್ಯದರ್ಶಿ ರವೀಂದ್ರ ರೈ ಗೋಸಾಡ, ದೇವರಾಜ್ ಭಂಡಾರಿ, ಅಖಿಲೇಶ್ ನಗುಮುಖಂ, ಪ್ರಮೋದ್ ಭಾಗವಹಿಸಿದರು.

Leave a Reply

Your email address will not be published. Required fields are marked *

You cannot copy content of this page