ನಾಳೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೆ ಕಾಂಗ್ರೆಸ್ ಮಾರ್ಚ್
ಕಾಸರಗೋಡು: ಜಿಲ್ಲೆಯ ಕಾಂಗ್ರೆಸ್ ಮಂಡಲ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಿಗೆ ನಾಳೆ ಬೆಳಿಗ್ಗೆ ೧೦ಕ್ಕೆ ಮಾರ್ಚ್ ನಡೆಸಲಾಗುವು ದೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಕೆ. ಫೈಸಲ್ ತಿಳಿಸಿದ್ದಾರೆ. ಮುಖ್ಯಮಂತ್ರಿಯ ಅಂಗರಕ್ಷಕರು ಮತ್ತು ಪೊಲೀಸರು ಸಿಪಿಎಂ ಗೂಂಡಾಗಳೊಂದಿಗೆ ಕೈಬೆಸೆದು ಯೂತ್ ಕಾಂಗ್ರೆಸ್ ಮತ್ತು ಕೆಎಸ್ಯು ಕಾರ್ಯಕರ್ತರ ಮೇಲೆ ರಾಜ್ಯ ವ್ಯಾಪಕ ದೌರ್ಜನ್ಯವೆಸಗುತ್ತಿದ್ದಾರೆಂದೂ ಅದನ್ನು ಪ್ರತಿಭಟಿಸಿ ಮಾರ್ಚ್ ನಡೆಯಲಿದೆ.