ಪ್ರತಾಪನಗರ ಶಿವಶಕ್ತಿ ಮೈದಾನದಲ್ಲಿ ಬೀದಿ ನಾಯಿಗಳ ಕಾಟ: ಸ್ಥಳೀಯರಲ್ಲಿ ಆತಂಕ

ಉಪ್ಪಳ: ಬೀದಿ ನಾಯಿಗಳ ಕಾಟ ದಿನದಿಂದ ದಿನಕ್ಕೆ ವ್ಯಾಪಕಗೊಳ್ಳುತ್ತಿರುವುದು ಸ್ಥಳೀಯರಲ್ಲಿ ಆತಂಕವನ್ನುAಟುಮಾಡಿದೆ. ಪ್ರತಾಪನಗರದ ಶಿವಶಕ್ತಿ ಮೈದಾನದಲ್ಲಿ ನಾಯಿಗಳ ಹಿಂಡು ಕಂಡುಬರುತ್ತಿದೆ. ಕಳೆದ ಒಂದು ತಿಂಗಳಿAದ ಶಿವಶಕ್ತಿ ಮೈದಾನದಲ್ಲಿ ನಿರಂತರವಾಗಿ ಸುಮಾರು 10ರಷ್ಟು ಅಲೆಮಾರಿ ನಾಯಿಗಳ ಹಿಂಡು ಈ ಪರಿಸರದ ಗಣೇಶ ಮಂದಿರ, ಗಾಯತ್ರಿ ಮಂದಿರ, ಗುಳಿಗ ಬನ ಪರಿಸರದಲ್ಲಿ ಅಲೆದಾಡುತ್ತಿದ್ದು, ಸ್ಥಳೀಯರನ್ನು ಭೀತಿಗೊಳಗಾಗುವಂತೆ ಮಾಡಿದೆ. ದ್ವಿಚಕ್ರ ವಾಹನ ಸವಾರರನ್ನು, ನಡೆದು ಹೋಗುವವರನ್ನು ಬೆನ್ನಟ್ಟುತ್ತಿರುವುದಾಗಿ ದೂರಲಾಗಿದೆ. ಇದರಿಂದ ಈ ಪರಿಸರದ ಶಾಲಾ ಕಾಲೇಜು ವಿದ್ಯಾರ್ಥಿ ಗಳು, ಮಹಿಳೆಯರ ಸಹಿತ ಊರವರು ಆತಂಕ ಗೊಂಡಿದ್ದಾರೆ. ಮೈದಾನದಲ್ಲಿ ದಾರಿ ದೀಪ ಉರಿಯದೆ ಇರುವುದರಿಂದ ರಾತ್ರಿ ಹೊತ್ತಲ್ಲಿ ಸಂಚರಿಸುವವರಿಗೆ ಆತಂಕ ಉಂಟಾಗಿದೆ. ಸಂಬAಧಪಟ್ಟ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

RELATED NEWS

You cannot copy contents of this page