ಪ್ರತಾಪನಗರ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಳ: ಪ್ರತಾಪನಗರ ಶ್ರೀ ಗೌರೀಗಣೇಶ ಭಜನಾ ಮಂದಿರದ ಆಶ್ರಯದಲ್ಲಿ ನಡೆಯುವ ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ, 7ನೇ ವರ್ಷದ ಭಜನೋತ್ಸವ ಹಾಗೂ 41ನೇ ವರ್ಷದ ಸಾರ್ವಜನಿಕ ಶ್ರೀ ಗೌರೀಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಗಣೇಶ ಮಂದಿರದಲ್ಲಿ ನಡೆಯಿತು. ಉತ್ಸವ ಸಮಿತಿ ಅಧ್ಯಕ್ಷ ದುಗ್ಗಪ್ಪ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಪ್ರಧಾನ ಕಾರ್ಯದರ್ಶಿ ಲೀಲಾಧರ ಆಚಾರ್ಯ, ಕೋಶಾ ಧಿಕಾರಿ ನಾರಾ ಯಣ ಮಣಿಯಾಣಿ, ಗೌರವಾಧ್ಯಕ್ಷ ಶಿವಾನಂದ ಆಚಾರ್ಯ ಉಪಸ್ಥಿತರಿ ದ್ದರು. ಪುರುಷೆÆÃತ್ತಮ ಪ್ರತಾಪನಗರ ಆಮಂತ್ರಣ ಪತ್ರಿಕೆ ಮನೆಗಳಿಗೆ ವಿತರಿಸುವ ಬಗ್ಗೆ ಮಾಹಿತಿ ನೀಡಿದರು. ಲೀಲಾಧರ ಆಚಾರ್ಯ ಸ್ವಾಗತಿಸಿ, ಅನಿಲ್ ಕುಮಾರ್ ವಂದಿಸಿದರು. ಸಮಿತಿಯ ಇತರ ಪದಾಧಿಕಾರಿಗಳು, ಕಾರ್ಯಕರ್ತರು, ವಿವಿಧ ಸಂಘ ಸಂಸ್ಥೆ ಗಳ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸೆಪ್ಟಂಬರ್ 4ರಿಂದ 8ರ ತನಕ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕöÈತಿಕ ಕಾರ್ಯಕ್ರಮಗಳೊಂದಿಗೆ ಗಣೇಶೋತ್ಸವ ನಡೆಯಲಿದೆ.

Leave a Reply

Your email address will not be published. Required fields are marked *

You cannot copy content of this page