ಬೈಕ್-ಸ್ಕೂಟರ್ ಢಿಕ್ಕಿ ಹೊಡೆದು ಯುವಕ ದಾರುಣ ಮೃತ್ಯು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯಲ್ಲಿ ಮೈಲಾಟಿ ಪೆಟ್ರೋಲ್ ಪಂಪ್ ಸಮೀಪ ಬೈಕ್ ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಪ್ರಯಾಣಿಕನಾದ ಯುವಕ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ.  ಪೊಯಿನಾಚಿ ಮೊಟ್ಟದ ರಾಜೇಂದ್ರನ್ ಎಂಬವರ ಪುತ್ರ ಮಣಿಕಂಠನ್ (24) ಸಾವನ್ನಪ್ಪಿದ ದುರ್ದೈವಿ. ನಿನ್ನೆ ರಾತ್ರಿ ೮ ಗಂಟೆ ವೇಳೆ ಅಪಘಾತ ಸಂಭವಿಸಿದೆ. ಮಣಿಕಂಠನ್ ಬೇಕಲದ ಜ್ಯೂಸ್ ಅಂಗಡಿಯಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ವೇಳೆ ಅಪಘಾತ ಉಂಟಾಗಿದೆ. ಬೈಕ್ ಚಲಾಯಿಸುತ್ತಿದ್ದ ಮೈಲಾಟಿಯ ಪ್ರಜ್ವಲ್ (23) ಗಾಯಗೊಂಡಿದ್ದು, ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಢಿಕ್ಕಿ ಆಘಾತದಲ್ಲಿ ಎರಡೂ ವಾಹನಗಳು ತೀವ್ರ ಹಾನಿಗೊಂಡಿದೆ. ಮಣಿಕಂಠನ್‌ರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಯಿತು. ಮೃತರು ತಂದೆ, ತಾಯಿ ಪ್ರಸನ್ನ, ಸಹೋದರಿ ರಸ್ನಾ (ಮಲಪ್ಪುರಂದಲ್ಲಿ ಬ್ಯಾಂಕ್ ಉದ್ಯೋಗಿ) ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

RELATED NEWS

You cannot copy contents of this page