ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ: ಜಿಲ್ಲಾ ನ್ಯಾಯಾಲಯದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ಸರಕಾರ

ಕಾಸರಗೋಡು: ಮಂಜೇಶ್ವರ ಚುನಾವಣಾ ತಕರಾರು ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ರಾಜ್ಯ ಸರಕಾರ ಕೇರಳ ಹೈಕೋರ್ಟ್‌ಗೆ ರಿವಿಶನ್ ಪಿಟಿಶನ್ ಸಲ್ಲಿಸಿದೆ.

2021ರಲ್ಲಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಉಮೇದ್ವಾರರಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ 2.5 ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆ ಎಂದು ಆರೋಪಿಸಿ ಅಂದು ಇದೇ ಕ್ಷೇತ್ರದ ಎಡರಂಗ ಅಭ್ಯರ್ಥಿ ನೀಡಿದ ದೂರಿನಂತೆ ಅಂದು ಮಂಜೇಶ್ವರದಲ್ಲಿ ಬಿಜೆಪಿ ಉಮೇದ್ವಾರರಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಒಟ್ಟು ಆರು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆ ಪ್ರಕರಣದ ತನಿಖೆಯನ್ನು  ಬಳಿಕ ಜಿಲ್ಲಾ ಕ್ರೈಮ್ ಬ್ರಾಂಚ್ ವಿಭಾಗಕ್ಕೆ ಹಸ್ತಾಂತರಿಸಲಾಗಿತ್ತು. ಅದರಂತೆ ಕ್ರೈಮ್ ಬ್ರಾಂಚ್ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ತಮ್ಮ ವಿರುದ್ಧ ದಾಖಲಿ ಸಲಾಗಿರುವ ಕೇಸು ವಾಸ್ತವರಹಿತವಾ ದುದೆಂದೂ, ಕಾನೂನು ಪರವಾಗಿ ಅದು ನೆಲೆಗೊಳ್ಳದೆಂದು, ಅದರಿಂದ ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೆ. ಸುರೇಂದ್ರನ್ ಸೇರಿದಂತೆ ಈ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿದ್ದ ಆರು ಮಂದಿ ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ಬಗ್ಗೆ ನಡೆದ ಪ್ರತಿವಾದವನ್ನು  ಆಲಿಸಿದ ನ್ಯಾಯಾಲಯ ಕೆ. ಸುರೇಂದ್ರನ್ ಸೇರಿದಂತೆ ಆರು ಮಂದಿಯನ್ನು ಕೊನೆಗೆ ದೋಷಮುಕ್ತಗೊಳಿಸಿ ತೀರ್ಪು ನೀಡಿತ್ತು. ಆ ತೀರ್ಪಿನ ವಿರುದ್ಧ ಸರಕಾರ ಈಗ ಹೈಕೋ ರ್ಟ್‌ಗೆ  ರಿವಿಷನ್ ಪಿಟಿಷನ್ ಸಲ್ಲಿಸಿದೆ.

RELATED NEWS

You cannot copy contents of this page