ಮದ್ಯ ಸಹಿತ ಓರ್ವ ಸೆರೆ
ಉಪ್ಪಳ: ಬಂದ್ಯೋಡು ಕಲ್ಮಟ್ಟದಲ್ಲಿ ಕಾಸರಗೋಡು ಎಕ್ಸೈಸ್ ಸರ್ಕಲ್ ಕಚೇರಿಯ ಪ್ರಿವೆಂಟೀವ್ ಆಫೀಸರ್ ಎಂ.ವಿ. ಸುಧೀಂದ್ರನ್ರ ತಂಡ ನಿನ್ನೆ ನಡೆಸಿದ ಕಾರ್ಯಾಚರ ಣೆಯಲ್ಲಿ 15.66 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ಸ್ಥಳೀಯ ಸಂದೀಪ್ ರಾಘವನ್ ಎಂ. (37) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಳಿಸಲಾಗಿದೆ. ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಜಿತೇಂದ್ರನ್ ಕೆ. ಮತ್ತು ಸಿಜಿನ್ ಸಿ. ಎಂಬವರು ಒಳಗೊಂಡಿದ್ದರು.