ಮಧೂರು ಕ್ಷೇತ್ರ ಬ್ರಹ್ಮಕಲಶೋತ್ಸವ ಕಾರ್ಯಕರ್ತರ ಬೃಹತ್ ಸಮಾವೇಶ

ಮಧೂರು: ಇಲ್ಲಿನ ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ಕ್ಷೇತ್ರದ ಅಷ್ಟಬಂಧ ಬ್ರಹ್ಮಕಲಶೋತ್ಸವದಂಗವಾಗಿ ಮಧೂರು ಕ್ಷೇತ್ರ ಪರಿಸರದಲ್ಲಿ ನಡೆದ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ವೇಳೆ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ| ಬಿ.ಎಸ್. ರಾವ್ ಅಧ್ಯಕ್ಷತೆ ವಹಿಸಿದರು. ಕರ್ನಾಟಕದ ಮಾಜಿ ಸಂಸದ ಎಂ.ಪಿ. ನವೀನ್ ಕುಮಾರ್ ಕಟೀಲ್, ಕಜಂಪಾಡಿ ಸುಬ್ರಹ್ಮಣ್ಯ ಭಟ್, ಜಯದೇವ್ ಖಂಡಿಗೆ, ಮಂಜುನಾಥ್ ಕಾಮತ್, ಪವಿತ್ರಪಾಣಿ ರತನ್ ಕುಮಾರ್ ಕಾಮಡ, ಮಧೂರು ಪಂಚಾಯತ್ ಅಧ್ಯಕ್ಷ ಗೋಪಾಲಕೃಷ್ಣ ಮೊದಲಾದವರು ಭಾಗವಹಿಸಿದರು. ಸುನಿಲ್ ಕುದ್ರೆಪ್ಪಾಡಿ ಸ್ವಾಗತಿಸಿದರು.

You cannot copy contents of this page