ಉಪ್ಪಳ: ಕಣ್ವತೀರ್ಥ ನಿವಾಸಿ ಮಹಮ್ಮದ್ ಮಸೂದ್ ಎಂಬವರ ಸ್ಕೂಟರ್ ಕಳವಿಗೀಡಾದ ಬಗ್ಗೆ ದೂರಲಾಗಿದೆ. ಈ ತಿಂಗಳ 13ರಂದು ರಾತ್ರಿ ಮನೆ ಬಳಿ ನಿಲ್ಲಿಸಿದ್ದ ಸ್ಕೂಟರ್ ಮರುದಿನ ಬೆಳಿಗ್ಗೆ ನೋಡಿದಾಗ ನಾಪತ್ತೆಯಾಗಿದೆ ಯೆಂದು ಮಂಜೇಶ್ವರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.