ಮೆರವಣಿಗೆ: ಕಾಂಗ್ರೆಸ್ ಜಿಲ್ಲಾಧ್ಯಕ್ಷರೂ ಸೇರಿ ೨೦ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೇಸು

ಕಾಸರಗೋಡು: ಮೋದಿ ಉಪನಾಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸೂರತ್‌ನ  ನ್ಯಾಯಾಲಯ ನೀಡಿದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಿನ್ನೆ ನಗರದಲ್ಲಿ ನಡೆದ ಮೆರವಣಿಗೆ ಸಂಬಂಧಿಸಿ  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪಿ.ಕೆ. ಫೈಸಲ್ ಮತ್ತು ಮನಾಫ್ ನುಳ್ಳಿಪ್ಪಾಡಿ ಸೇರಿದಂತೆ ೨೦ ಮಂದಿಯ ವಿರುದ್ಧ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪೊಲೀಸರ ಅನುಮತಿ ಪಡೆಯದೆ ಮೆರವಣಿಗೆ ನಡೆಸುವಿಕೆ ಮತ್ತು  ಆ ಮೂಲಕ ರಸ್ತೆಯಲ್ಲಿ ಸಾರಿಗೆ ಸಂಚಾರಕ್ಕೆ ಅಡಚಣೆ ಸೃಷ್ಟಿಸುವಿಕೆ ಎಂಬೀ ಆರೋಪದಂತೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED NEWS

You cannot copy contents of this page