ಯುವ ಉದ್ಯಮಿ ನೇಣು ಬಿಗಿದು ಸಾವು

ಮುಳ್ಳೇರಿಯ: ಯುವ ಉದ್ಯಮಿ ಯೊಬ್ಬರು ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ನಾಟೆಕಲ್ಲು ಬಳಿಯ ಬೆಳ್ಳೂರಡ್ಕ ಎಂಬಲ್ಲಿನ ದಿ| ಶ್ರೀಧರ ಎಂಬವರ ಪುತ್ರ ಕೀರ್ತನ್ (27) ಮೃತಪಟ್ಟ ಯುವಕನಾಗಿದ್ದಾರೆ. ಇವರು ಮುಳ್ಳೇರಿ ಯದಲ್ಲಿ ಕಾರು ವಾಷಿಂಗ್ ಹಾಗೂ ಸಿರಾಮಿಕ್ ಕೋಟಿಂಗ್ ಸಂಸ್ಥೆಯನ್ನು ನಡೆಸುತ್ತಿದ್ದರು. ನಿನ್ನೆ ಮಧ್ಯಾಹ್ನ ವೇಳೆ ಮನೆಯಲ್ಲಿದ್ದ ಕೀರ್ತನ್ ಬೆಡ್‌ರೂಂಗೆ ತೆರಳಿದ್ದು, ದೀರ್ಘ ಹೊತ್ತ್ತಾದರೂ ಹೊರಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಹೋದರ ಬಾಗಿಲು ತೆರೆದು ನೋಡಿದಾಗ ಕೀರ್ತನ್ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ. ಕೂಡ ಲೇ ಹಗ್ಗ ತುಂಡರಿಸಿ ಮುಳ್ಳೇರಿಯದ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಂತೆ ದಾರಿ ಮಧ್ಯೆ ಸಾವು ಸಂಭವಿಸಿದೆ. ಆತ್ಮಹತ್ಯೆಗೆ ಕಾರಣವೇನೆಂದು ತಿಳಿದುಬಂದಿಲ್ಲ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೊಳಪಡಿಸಿ ಬಳಿಕ ಸ್ವ-ಗೃಹಕ್ಕೆ ಕೊಂಡೊಯ್ದು ಇಂದು ಬೆಳಿಗ್ಗೆ ಅಂತ್ಯಸಂಸ್ಕಾರ ನಡೆಸಲಾಯಿತು.

ಮೃತರು ತಾಯಿ ಕುಸುಮ, ಸಹೋದರ ಕಿರಣ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page