ರಸ್ತೆ ಮಧ್ಯ ಅಪಘಾತಕ್ಕೆ ಕಾರಣವಾಗುತ್ತಿರುವ ವಿದ್ಯುತ್ ಕಂಬ ತೆರವಿಗೆ ಆಗ್ರಹ

ಉಪ್ಪಳ: ವಿದ್ಯುತ್ ಕಂಬವೊAದು ರಸ್ತೆ ಮುಧ್ಯದಲ್ಲಿದ್ದು ಯಾವುದೇ ಕ್ಷಣದಲ್ಲಿ ಅಪಘಾತ ಸಂಭವಿಸಬಹುದಾಗಿದೆ. ಉಪ್ಪಳ ವಿದ್ಯುತ್ ಇಲಾಖೆ ವ್ಯಾಪ್ತಿಗೊಳಪಡುವ ಹೆದ್ದಾರಿಯಿಂದ ಕೆಲವೇ ಮೀಟರ್ ದೂರದ ನಯಬಜಾರ್‌ನ ಅಂಬಾರು ರಸ್ತೆ ಮಧ್ಯೆ ಈ ವಿದ್ಯುತ್ ಕಂಬವಿದೆ. ಈ ಹಿಂದೆ ಬದಿಯಲ್ಲಿದ್ದ ವಿದ್ಯುತ್ ಕಂಬ ರಸ್ತೆ ಅಗಲಗೊಳಿಸಿದಾಗ ಕಂಬವನ್ನು ತೆರವುಗೊಳಿಸದ ಕಾರಣ ಈಗ ರಸ್ತೆಯ ಮಧ್ಯ ಭಾಗಕ್ಕೆ ತಲುಪಿದೆ. ಹಲವು ಭಾರಿ ತೆರವುಗೊಳಿಸಲು ತಿಳಿಸಿದರೂ ಕ್ರಮಕ್ಕೆ ಮುಂದಾಗಲಿಲ್ಲವೆAದು ಸ್ಥಳಿಯರು ತಿಳಿಸಿದ್ದಾರೆ. ಈ ರಸ್ತೆಯಿಂದ ಅಂಬಾರು, ಚೆರುಗೋಳಿ, ಸೋಂಕಾಲು, ಪ್ರತಾಪನಗರಕ್ಕೆ ನೂರಾರು ವಾಹನಗಳು ಸಂಚಾರ ನಡೆಸುತ್ತಿವೆ. ಅಲ್ಲದೆ ಈ ಪರಿಸರದಲ್ಲಿ ಅಗ್ನಿ ಶಾಮಕ ಕೇಂದ್ರ ಕಾಯÁðಚರಿಸುತ್ತಿದ್ದು, ಸಂಚಾರಕ್ಕೆ ತೊಂದರೆಯಾಗುತ್ತಿರುವುದಾಗಿ ದೂರಲಾಗಿದೆ. ಅಪಘಾತಕ್ಕೀಡಾಗಿ ಕಂಬ ಮುರಿದು ಬಿದ್ದಲ್ಲಿ ದುರಂತ ಸಂಭವಿಸಲಿದೆ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಂಬAಧಪಟ್ಟ ವಿದ್ಯುತ್ ಇಲಾಖೆ ಕಂಬವನ್ನು ಮಧ್ಯಭಾಗದಿಂದ ತೆರವುಗೊಳಿಸಿ ಬದಿಯಲ್ಲಿ ಸ್ಥಾಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page