ರಾಜ್ಯದಲ್ಲಿ ಮಳೆ ಮುಂದುವರಿಕೆ

xತಿರುವನಂತಪುರ: ರಾಜ್ಯದಲ್ಲಿ ಇನ್ನೂ ಐದು ದಿನಗಳ ತನಕ ಮಳೆ ಮುಂದುವರಿಯಲಿದೆಯೆಂದು  ಕೇಂದ್ರೀಯ ಹವಾಮಾನ ಇಲಾಖೆ ತಿಳಿಸಿದೆ. ಪತ್ತನಂತಿಟ್ಟ, ಇಡುಕ್ಕಿ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ. ಆದ್ದರಿಂದ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರ ಹೊರತಾಗಿ ಅರಬ್ಬೀ ಸಮುದ್ರದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ರಾಜ್ಯದಲ್ಲಿ  ಕೆಲವು ದಿನಗಳ ತನಕ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದು ಕಡಲ್ಕೊರೆತಕ್ಕೂ ದಾರಿ ಮಾಡಿಕೊ ಡಲಿದೆಯೆಂದು ಇಲಾಖೆ ಹೇಳಿದೆ.

Leave a Reply

Your email address will not be published. Required fields are marked *

You cannot copy content of this page