ರಿಕ್ಷಾ ಚಾಲಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ರಿಕ್ಷಾ ಚಾಲಕರೊಬ್ಬರು ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಅಡ್ಕತ್ತಬೈಲು ಕೋಟೆವಳಪ್ಪು ನಿವಾಸಿ ಕೆ.ಅನಿಲ್ ಕುಮಾರ್ (53) ಮೃತಪಟ್ಟ ವ್ಯಕ್ತಿ. ಇವರು ಕಾಸರಗೋಡು ನಗರದಲ್ಲಿ ಆಟೋ ರಿಕ್ಷಾ ಚಾಲಕನಾಗಿದ್ದರು. ನಿನ್ನೆ ಅಪರಾಹ್ನ 3 ಗಂಟೆ ವೇಳೆ ಮನೆ ಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಇವರು ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆ. ಬಾಬು-ದಿ| ಸರೋಜಿನಿ ದಂಪತಿಯ ಪುತ್ರನಾದ ಮೃತರು ಪತ್ನಿ ಸುರೇಖಾ, ಮಕ್ಕಳಾದ ಅನುರಾಗ್, ರಂಜು, ಅನಿರುದ್ಧ್, ಸಹೋದರ-ಸಹೋದರಿಯರಾದ ಸುನಿಲ್, ಸಂತೋಷ್, ವಿನೋದ್, ಸವಿತಾ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.