ವಿದ್ಯುತ್ ದರ ಏರಿಕೆ ವಿರುದ್ಧ ಬದಿಯಡ್ಕದಲ್ಲಿ ಬಿಜೆಪಿ ಪ್ರತಿಭಟನೆ
ಬದಿಯಡ್ಕ: ವಿದ್ಯುತ್ ದರ ಏರಿಕೆ ವಿರುದ್ಧ ಬಿಜೆಪಿ ಬದಿಯಡ್ಕ ಪಂಚಾಯತ್ ಸಮಿತಿ ವತಿಯಿಂದ ನಿನ್ನೆ ಸಂಜೆ ಬದಿಯಡ್ಕದಲ್ಲಿ ಪಂಜಿನ ಮೆರವಣಿಗೆ ನಡೆಯಿತು. ಬಿಜೆಪಿ ಮುಖಂಡ ಮೈರ್ಕಳ ನಾರಾಯಣ ಭಟ್ ಮಾತನಾಡಿ ವಿದ್ಯುತ್ ದರವನ್ನು ಏರಿಸುವ ಮೂಲಕ ರಾಜ್ಯ ಸರಕಾರವು ಜನತೆಯ ಜೇಬಿಗೆ ಕತ್ತರಿ ಹಾಕುವ ಕಾರ್ಯವನ್ನು ಮಾಡುತ್ತಿದೆ. ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ ಸರಕಾರದ ವಂಚನೆಯ ಆಡಳಿತ ಕೊನೆಗಾಣಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರಧಾನ ಕಾರ್ಯದರ್ಶಿ ಅವಿನಾಶ್ ರೈ, ಬಾಲಕೃಷ್ಣ ಶೆಟ್ಟಿ, ಶರತ್ ವಳಮಲೆ, ರವಿ ಬಿಎಂಎಸ್, ವಕೀಲ ಗಣೇಶ್, ಈಶ್ವರ ಮಾಸ್ತರ್ ಪೆರಡಾಲ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.