ವಿವಿಧೆಡೆಗಳಲ್ಲಿ ಅಬಕಾರಿ ದಾಳಿ : ಗಾಂಜಾ, ಮದ್ಯ, ವಾಶ್ ವಶ

ಕಾಸರಗೋಡು: ಅಬಕಾರಿ ತಂಡ ಜಿಲ್ಲೆಯ ವಿವಿಧೆಡೆಗಳಲ್ಲಾಗಿ ನಡೆಸಿದ ಮೂರು ಕಾರ್ಯಾಚರಣೆಗಳಲ್ಲಾಗಿ ಗಾಂಜಾ, ಮದ್ಯ ಹಾಗೂ ವಾಶ್ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಮಂಜೇಶ್ವರ ಕುಬಣೂರು ಸಫಾ ನಗರದಲ್ಲಿ ಕುಂಬಳೆ ಅಬಕಾರಿ ರೇಂಜ್ ಎಕ್ಸೈಸ್ ಇನ್ಸ್‌ಪೆಕ್ಟರ್ ಮ್ಯಾಥ್ಯು ಕೆ.ಡಿ.ಯವರ ನೇತೃತ್ವದ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 160 ಗ್ರಾಂ ಗಾಂಜಾ ಪತ್ತೆಹಚ್ಚಿ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ಕುಬಣೂರು ಸಫಾ ನಗರದ ಅಬೂಬಕ್ಕರ್ ಸಿದ್ದೀಕ್ (37) ಎಂಬಾತನನ್ನು ಬಂಧಿಸಿ ಕೇಸು ದಾಖಲಿಸಲಾಗಿದೆ. ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್(ಗ್ರೇಡ್) ಅನೀಶ್ ಕುಮಾರ್ ಎಂ, ಪ್ರಿವೆಂಟಿವ್ ಆಫೀಸರ್ ಮನಾಸ್ ಕೆ.ವಿ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಅಖಿಲೇಶ್ ಎಂ.ಎಂ, ಧನೇಶ್ ಎಂ. ಮತ್ತು ಚಾಲಕ ಪ್ರವೀಣ್ ಎಂಬವರು ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಒಳಗೊಂಡಿದ್ದರು.

ಇನ್ನೊಂದೆಡೆ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್‌ನ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಸಿ.ಕೆ.ವಿ. ಸುರೇಶ್‌ರ ನೇತೃತ್ವದ ಅಬಕಾರಿ ತಂಡ ಕೂಡ್ಲು ಸೂರ್ಲಿನಲ್ಲಿ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಜನವಾಸವಿಲ್ಲದ ಹಿತ್ತಿಲ ಪೊದೆಯಲ್ಲಿ ಬಚ್ಚಿಡಲಾಗಿದ್ದ 180 ಎಂ.ಎಲ್.ನ 168 ಟೆಟ್ರಾ ಪ್ಯಾಕೆಟ್ (30.24 ಲೀಟರ್) ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಗ್ರೇಡ್ ಪ್ರಿವೆಂಟಿವ್ ಆಫೀಸರ್ ನೌಶಾದ್ ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಮಂಜುನಾಥನ್ ವಿ, ಅತುಲ್ ಟಿ.ವಿ. ಮತ್ತು ಚಾಲಕ ಸಜೀಶ್ ಒಳಗೆಂಡಿದ್ದರು.

ಇದೇ ರೀತಿ ವೆಸ್ಟ್ ಎಳೇರಿ ವಣ್ಣಾಲಕುನ್ನುನಲ್ಲಿ ನೀಲೇಶ್ವರದ ಅಬಕಾರಿ ರೇಂಜ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಅನೀಶ್ ಕುಮಾರ್ ಕೆ.ಯು.ರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಕಳ್ಳಭಟ್ಟಿ ಸಾರಾಯಿ ತಯಾರಿಗಾಗಿ ಸಿದ್ಧಪಡಿಸಲಾಗಿದ್ದ 40 ಲೀಟರ್ ವಾಶ್ (ಹುಳಿರಸ) ಪತ್ತೆಹಚ್ಚಿ ವಶಕ್ಕೆ ತೆಗೆದುಕೊಂಡಿದೆ. ಇದಕ್ಕೆ ಸಂಬಂಧಿಸಿ ವಣ್ಣಾಲಕುನ್ನು ನಿವಾಸಿ ಕಾರ್ತ್ಯಾಯಿನಿ (47) ಎಂಬಾಕೆಯ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಹರೀಂದ್ರನ್ ಪಿ.ಎ, ಪ್ರಿವೆಂಟೀವ್ ಆಫೀಸರ್ ರಾಜನ್ ಪಿ, ಮಹಿಳಾ ಸಿವಿಲ್ ಎಕ್ಸೈಸ್ ಆಫೀಸರ್ ಸಜ್ನಾ ಮತ್ತು ಚಾಲಕ  ರಾಜೀವನ್ ಪಿ. ಎಂಬವರು ಒಳಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page