ವಿವಿಧೆಡೆಗಳಿಂದ ಗಾಂಜಾ ವಶ: ಮೂವರ ಸೆರೆ

ಕಾಸರಗೋಡು: ಅಬಕಾರಿ ತಂಡ ನಿನ್ನೆ ಜಿಲ್ಲೆಯ ವಿವಿಧೆಡೆಗಳಲ್ಲಾಗಿ ನಡೆಸಿದ ಕಾರ್ಯಾಚರಣೆಗಳಲ್ಲಿ  ಭಾರೀ ಪ್ರಮಾಣದ ಗಾಂಜಾ  ವಶಪ ಡಿಸಿಕೊಂಡಿದೆ. ಇದಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ.

ಪನಯಾಲ್ ಗ್ರಾಮದ ಪಳ್ಳಾರಂನಲ್ಲಿ ಹೊಸದುರ್ಗ ಎಕ್ಸೈಸ್ ಸರ್ಕಲ್ ಕಚೇರಿಯ ಇನ್‌ಸ್ಪೆಕ್ಟರ್ ದಿಲೀಪ್ ಎಂ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 6 ಕಿಲೋ ಗಾಂಜಾ  ಪತ್ತೆಹಚ್ಚಿ ವಶಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿ ಪನಯಾಲ್ ತೊಂಡೋಳಿ ನಿವಾಸಿಗಳಾದ ಆಶಿಕ್ ಮತ್ತು ಹ್ಯಾರಿಸ್ ಎಂಬಿಬ್ಬರನ್ನು ಬಂಧಿಸಿ ಅವರ ವಿರುದ್ಧ ಎನ್‌ಡಿಪಿಎಸ್  ಕಾನೂನುಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಮಾಲು ಸಾಗಿಸಲು ಬಳಸಿದ ಸ್ಕೂಟರನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಈ ಕಾರ್ಯಾಚರಣೆ ನಡೆಸಿದ  ತಂಡದಲ್ಲಿ ಸಿಇಒಗಳಾದ ಶಿಜು ಕೆ, ಮನೋಜ್ ಪಿ, ನಿಶಾದ್ ಪಿ, ಪ್ರಿವೆಂಟೀವ್ ಆಫೀಸರ್ (ಗ್ರೇಡ್)ಪಿ.ಕೆ. ಬಾಬುರಾಜ್, ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ರಾಜೀವನ್ ಎಂ, ಚಾಲಕ ಡಿಜಿತ್ ಎಂಬಿವರು ಒಳಗೊಂಡಿದ್ದರು.

ಇದೇ ರೀತಿ ಚೆರ್ಲಡ್ಕದಲ್ಲಿ ಕಾಸರಗೋಡು ಎಕ್ಸೈಸ್ ಎನ್‌ಫೋರ್ಸ್‌ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಶಲ್ ಸ್ಕ್ವಾಡ್‌ನ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಶೋಬ್ ಕೆ.ಎಸ್ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ 10 ಗ್ರಾಂ ಗಾಂಜಾದೊಂದಿಗೆ ನೆಕ್ರಾಜೆ ಬೀಟಿಯಡ್ಕದ ನಿಹಾಲ್ (19) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಮುರಳಿ ಕೆ, ಪ್ರಿವೆಂಟೀವ್ ಆಫೀಸರ್‌ಗಳಾದ ನೌಶಾದ್, ಪ್ರಶಾಂತ್ ಕುಮಾರ್ ಮತ್ತು ಸಿಇಒಗಳಾದ ಮಂಜುನಾಥ, ಸೋನು ಸೆಬಾಸ್ಟಿನ್ ಎಂಬಿವರು ಒಳಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page