ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ರಿಗೆ ಬಿಜೆಪಿ ಜಿಲ್ಲಾ ಸಮಿತಿಯಿಂದ ಸ್ಮಾರಕ
ಕಾಸರಗೋಡು: ಬಿಜೆಪಿ ಕಾರ್ಯಕರ್ತ ರಿಂದ ಧನ ಸಂಗ್ರಹ ನಡೆಸಿ ಜಿಲ್ಲೆಯಲ್ಲಿ ಸಂವಿಧಾನಶಿಲ್ಪಿಯಾದ ಡಾ. ಬಿ.ಆರ್. ಅಂಬೇಡ್ಕರ್ರ ಪ್ರತಿಮೆಯನ್ನು ಹಾಗೂ ಸೂಕ್ತವಾದ ಸ್ಮಾರಕವನ್ನು ನಿರ್ಮಿಸಲು ಬಿಜೆಪಿ ಮುಂದಾಗಲಿದೆ ಎಂದು ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ತಿಳಿಸಿದರು. ಡಾ. ಬಿ.ಆರ್. ಅಂಬೇಡ್ಕರ್ರ ಜಯಂತಿಯಂ ಗವಾಗಿ ಜಿಲ್ಲಾ ಸಮಿತಿ ಆಯೋಜಿಸಿದ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು. ಈ ಹಿಂದಿನ ಕಾಲಘಟ್ಟ ಗಳಲ್ಲಿ ಅಂಬೇಡ್ಕರ್ಗೆ ಭಾರತರತ್ನ ನಿಷೇಧಿಸಿದ ಕಾಂಗ್ರೆಸ್ ಈಗ ಅಂಬೇಡ್ಕರ್ರೊಂದಿಗೆ ಪ್ರೀತಿ ತೋರಿಸುತ್ತಿದೆ ಎಂದು ಅಶ್ವಿನಿ ಆರೋಪಿಸಿದರು. ರಾಜ್ಯ ಕೌನ್ಸಿಲ್ ಸದಸ್ಯ ಬೇಬಿ ಸುನಗರ್ ವಿಷಯ ಮಂಡಿಸಿದರು. ಜಿಲ್ಲಾ ಉಪಾಧ್ಯಕ್ಷ ಎ.ಕೆ. ಕಯ್ಯಾರು ಅಧ್ಯಕ್ಷತೆ ವಹಿಸಿದರು. ಇನ್ನೋರ್ವ ಜಿಲ್ಲಾ ಉಪಾಧ್ಯಕ್ಷ ಎಂ. ಮಣಿಕಂಠ ರೈ, ಪ್ರಧಾನ ಕಾರ್ಯದರ್ಶಿಗಳಾದ ಎನ್. ಬಾಬುರಾಜ್, ಪಿ.ಆರ್. ಸುನಿಲ್, ಜಿಲ್ಲಾ ಕಾರ್ಯದರ್ಶಿಗಳಾದ ಸಂಜೀವ ಪುಳ್ಕೂರ್, ಪುಷ್ಪಾ ಗೋಪಾಲನ್, ಪ್ರಮೀಳಾ ಮಜಲ್, ಅಶ್ವಿನಿ ಕೆ.ಎಂ, ಜಿಲ್ಲಾ ಕೋಶಾಧಿಕಾರಿ ವೀಣಾ ಕುಮಾರಿ, ಮಧೂರು ಪಂ. ಅಧ್ಯಕ್ಷ ಕೆ. ಗೋಪಾಲಕೃಷ್ಣನ್, ರಾಮಪ್ಪ ಮಂಜೇಶ್ವರ ಮಾತನಾಡಿದರು.