ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 900 ಗ್ರಾಂ ಗಾಂಜಾ ವಶ: ಆರೋಪಿ ಬಂಧನ

ಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 900 ಗ್ರಾಂ ಗಾಂಜಾವನ್ನು ಕಾಸರಗೋಡು ಅಬಕಾರಿ ರೇಂಜ್ ಕಚೇರಿಯ ಎಕ್ಸೈಸ್ ಇನ್ಸ್‌ಪೆಕ್ಟರ್ ಜೋಸಫ್ ಜೆ.ಯು.ರ ನೇತೃತ್ವದ ಅಬಕಾರಿ ತಂಡ ಮುಟ್ಟತ್ತೋಡಿ ಪನ್ನಿಪ್ಪಾರದಿಂದ ನಿನ್ನೆ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿ ಕಾಸರಗೋಡು ಕೊರಕ್ಕೋಡು ನಿವಾಸಿ ನೌಶಾದ್ ಕೆ. (42) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ತಂಡ ನಿನ್ನೆ ಪನ್ನಿಪ್ಪಾರೆಯಲ್ಲಿ ವಾಹನ ತಪಾಸಣೆ ಯಲ್ಲಿ ತೊಡಗಿದಾಗ ಆ ದಾರಿಯಾಗಿ ನೌಶಾದ್ ಬಂದ ಸ್ಕೂಟರನ್ನು ತಡೆದು ನಿಲ್ಲಿಸಿ  ತಪಾಸಣೆ ನಡೆಸಿದಾಗ ಅದರಲ್ಲಿ ಗಾಂಜಾ ಪತ್ತೆಯಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಮಾಲು ಸಾಗಿಸಲು ಬಳಸಿದ ಸ್ಕೂಟರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಪ್ರಿವೆಂಟೀವ್ ಆಫೀಸರ್ ರಂಜಿತ್ ಕೆ.ವಿ., ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ರಾಜೇಶ್ ಪಿ, ಕಣ್ಣನ್ ಕುಂಞಿ, ಅಮಲ್‌ಜಿತ್, ಅಬ್ದುಲ್ ಅಸೀಸ್ ಮತ್ತು ಫಸೀಲಾ ಎಂಬವರು ಒಳಗೊಂಡಿದ್ದಾರೆ.

RELATED NEWS

You cannot copy contents of this page