ಹುಳಿರಸ ಪತ್ತೆ
ಮಧೂರು: ಮಧೂರು ಗ್ರಾಮದ ಮಲಂಗರದಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ತೊಡಿನ ಬಳಿ ಬಚ್ಚಿಡಲಾಗಿದ್ದ 30 ಲೀಟರ್ ವಾಶ್ (ಹುಳಿರಸ) ಪತ್ತೆಹಚ್ಚಿ ವಶಪಡಿಸಲಾಗಿದೆ.
ಕಾಸರಗೋಡು ಎಕ್ಸೈಸ್ ರೇಂಜ್ ಕಚೇರಿಯ ಇನ್ಸ್ಪೆಕ್ಟರ್ ಜೋಸೆಫ್ ಜೆ ನೇತೃತ್ವದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ವಿನೋದನ್ ಕೆ.ವಿ, ಸಿವಿಲ್ ಪೊಲೀಸ್ ಆಫೀಸರ್ಗಳಾದ ಅನುರಾಗ್ ಎಂ ಮತ್ತು ನಿಖಿಲ್ ಎ ಎಂಬಿವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.