ಅಂಬಾರು ಕ್ಷೇತ್ರದಲ್ಲಿ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗ: ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಲ್ಪಾಡಿ: ಅಂಬಾರು ಶ್ರೀ ಸದಾಶಿವ ಕ್ಷೇತ್ರದಲ್ಲಿ ಜುಲೈ 5ರಂದು ಲೋಕ ಕಲ್ಯಾಣಾರ್ಥವಾಗಿ ಜರಗುವ ನವಗ್ರಹ ಸಹಿತ ಸ್ವಯಂವರ ಪಾರ್ವತಿ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕ ವಾಸುದೇವ ಹೊಳ್ಳ ಪ್ರಾರ್ಥನೆ ಬಳಿಕ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು. ಸಮಿತಿಯ ಪದಾಧಿಕಾರಿಗಳಾದ ಎಚ್. ಕುಂಞಣ್ಣ ಶೆಟ್ಟಿಹಿತ್ತಿಲು ಮನೆ, ಕೊರಗಪ್ಪ ಶೆಟ್ಟಿ ಸಣ್ಣಹಿತ್ತಿಲು, ಬಾಲಕೃಷ್ಣ ಅಂಬಾರು, ಸಮಂತ್ ಕುಮಾರ್ ಶೆಟ್ಟಿ, ವಿಜಯ ಕುಮಾರ್ ರೈ ಮಲ್ಲಂಗೈ, ಮಹಿಳಾ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You cannot copy content of this page