ಅಬಕಾರಿ ದಾಳಿ: ಮದ್ಯ ವಶ

ಕಾಸರಗೋಡು: ಅಬಕಾರಿ ಇಲಾಖೆ ತಂಡ ನಿನ್ನೆ ಜಿಲ್ಲೆಯ ವಿವಿಧೆಡೆಗಳಲ್ಲಿ ನಡೆಸಿದ ದಾಳಿಯಲ್ಲಿ ಅಕ್ರಮ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಇದರಂತೆ ಮಂಜೇಶ್ವರ ಅಬಕಾರಿ ತಪಾಸಣಾ ಕೇಂದ್ರದಲ್ಲಿ ಎಕ್ಸೈಸ್ ಇನ್ಸ್‌ಪೆಕ್ಟರ್ ಆದರ್ಶ ಕೆ. ಜಿ.ಯವರ ನೇತೃತ್ವದ ಅಬಕಾರಿ ತಂಡ ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸೇರಿದ ಬಸ್‌ನಲ್ಲಿ  ನಡೆಸಿದ ತಪಾಸಣೆಯಲ್ಲಿ 3.6 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಆದರೆ ಈ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ. ಪ್ರಿವೆಂಟೀವ್ ಆಫೀಸರ್‌ಗಳಾದ ಮೊಯ್ದೀನ್ ಸಾದಿಕ್, ವಿಜಯನ್ ಸಿ.(ಗ್ರೇಡ್), ಪ್ರಶಾಂತ್ ಕುಮಾರ್ ವಿ. ಮತ್ತು  ಸಿವಿಲ್ ಎಕ್ಸೈಸ್ ಆಫೀಸರ್ ರಾಹುಲ್ ಟಿ. ಎಂಬವರು ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.

ಇದೇ ರೀತಿ ಕಾಟುಕುಕ್ಕೆ ಅಡ್ಕಸ್ಥಳದಲ್ಲಿ ಅಬಕಾರಿ ತಂಡ ನಿನ್ನೆ ನಡೆಸಿದ ವಾಹನ ತಪಾಸಣೆಯಲ್ಲಿ ಕೇರಳ ಕೆಎಸ್‌ಆರ್‌ಟಿಸಿ ಬಸ್‌ನಿಂದ 8.64 ಲೀಟರ್ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಕಾಸರಗೋಡು ಎಕ್ಸೈಸ್ ಸರ್ಕಲ್ ಎಕ್ಸೈಸ್ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್‌ಪೆಕ್ಟರ್ (ಗ್ರೇಡ್) ಜನಾರ್ದನನ್ ಕೆ.ಯು.ರ ನೇತೃತ್ವದಲ್ಲಿ ಪ್ರಿವೆಂಟೀವ್ ಆಫೀಸರ್ (ಗ್ರೇಡ್) ರಮೇಶನ್, ಸಿವಿಲ್ ಎಕ್ಸೈಸ್ ಆಫೀಸರ್ ಮೋಹನ್ ಕುಮಾರ್ ಎಲ್. ಎಂಬವರನ್ನೊಳಗೊಂಡ ಅಬಕಾರಿ ತಂಡ ಈ ಕಾರ್ಯಾಚರಣೆ ನಡೆಸಿದೆ. ಆದರೆ ಈ ಸಂಬಂಧ ಯಾರನ್ನೂ ಬಂಧಿಸಲಾಗಿಲ್ಲ. ಹೊಸದುರ್ಗ ಮಡಿಕೈ ತೋಡಿನ ಬಳಿ ಅಕ್ರಮವಾಗಿ ಬಚ್ಚಿಡಲಾಗಿದ್ದ ಎರಡು ಲೀಟರ್ ಕಳ್ಳಭಟ್ಟಿ ಸಾರಾಯಿಯನ್ನು ಹೊಸದುರ್ಗ ಅಬಕಾರಿ ರೇಂಜ್‌ನ ಅಸಿಸ್ಟೆಂಟ್ ಎಕ್ಸೈಸ್ ಆಫೀಸರ್ (ಗ್ರೇಡ್) ಟಿ. ಜಯರಾಜನ್‌ರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

Leave a Reply

Your email address will not be published. Required fields are marked *

You cannot copy content of this page