ಅಭಿಜಿತ್ ಮುಹೂರ್ತದಲ್ಲಿ ವಾರಣಾಸಿಯಲ್ಲಿ ಮೋದಿ ನಾಮಪತ್ರ ಸಲ್ಲಿಕೆ

ವಾರಣಾಸಿ: ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನ ಮಂತ್ರಿ ಇಂದು ಬೆಳಿಗ್ಗೆ ಅಭಿಜಿತ್ ಮುಹೂರ್ತದಲ್ಲಿ   ನಾಮಪತ್ರ ಸಲ್ಲಿಸಿದರು. 2014 ಮತ್ತು 2019 ರಲ್ಲೂ ಮೋದಿ ಇದೇ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ನಾಮಪತ್ರ ಸಲ್ಲಿಸುವ ವೇಳೆ ಯುಪಿ ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ವಿವಿಧ ರಾಜ್ಯಗಳ ಹಲವು ಮುಖ್ಯಮಂತ್ರಿಗಳು ಬಿಜೆಪಿ ಮತ್ತು ಎನ್‌ಡಿಎಯ ಹಲವು ಉನ್ನತ ನೇತಾರರೂ ಅವರನ್ನು ಅನುಗಮಿಸಿದರು.ನಾಮಪತ್ರ ಸಲ್ಲಿಸುವ ಮೊದಲು ಮೋದಿ ವಾರಣಾಸಿಯಲ್ಲಿ ನಿನ್ನೆ ಭರ್ಜರಿ ರೋಡ್ ಶೋ ನಡೆಸಿದರು. ಅದರಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡಾ ಭಾಗವಹಿಸಿದರು.

Leave a Reply

Your email address will not be published. Required fields are marked *

You cannot copy content of this page