ಎರಡೆಡೆ ಅಬಕಾರಿ ದಾಳಿ ಕರ್ನಾಟಕ ಮದ್ಯ ವಶ
ಕಾಸರಗೋಡು: ಅಬಕಾರಿ ತಂಡ ಎರಡೆಡೆಗಳಲ್ಲಾಗಿ ನಡೆಸಿದ ದಾಳಿಯಲ್ಲಿ ೧೮ ಲೀಟರ್ನಷ್ಟು ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.
ಇದರಂತೆ ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ ಸ್ಪೆಷಲ್ ಸ್ಕ್ವಾಡ್ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್) ಸುರೇಶ್ರ ನೇತೃತ್ವದ ತಂಡ ಎಡಕಾನದಲ್ಲಿ ನಡೆಸಿದ ದಾಳಿಯಲ್ಲಿ ರಸ್ತೆ ಬದಿಯ ಸಂಕದ ಬಳಿ ಬಚ್ಚಿಡಲಾಗಿದ್ದ ೧೪.೨೨ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದೆ.
ಇದೇ ರೀತಿ ಚೆಂಗಳ ಚೆರ್ಕಳ ಪೇಟೆಯಿಂದ ಹೊಸದುರ್ಗಕ್ಕೆ ಹೋ ಗುವ ರಾಷ್ಟ್ರೀಯ ಹೆದ್ದಾರಿ ಬಳಿಯ ಹಿತ್ತಿಲೊಂದರಲ್ಲಿ ಕಾಸರಗೋಡು ಎಕ್ಸೈಸ್ ರೇಂಜ್ ಕಚೇರಿಯ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ ವಿ.ವಿ. ರಾಜನ್ರ ನೇತೃತ್ವದ ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ೪.೩೨ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.