ಕರಸೇವಕನ ಬಂಧನ ಕರ್ನಾಟಕದಾದ್ಯಂತ ಇಂದು ಪ್ರತಿಭಟನೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನವನ್ನು ಖಂಡಿಸಿ ಇಂದು ಕರ್ನಾಟಕ ಸರಕಾರದ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆಯೆಂದು ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ರಾಜ್ಯ ಸರಕಾರ ಹಿಂದೂ ವಿರೋಧಿ ಎಂಬುವುದನ್ನು ದೇಶದ ಜನತೆಗೆ ಪದೇ ಪದೇ ನೆನಪು ಹುಟ್ಟಿಸುವ ಕೆಲಸ ಮಾಡುತ್ತಿದೆಯೆಂದು ಅವರು ಆರೋಪಿಸಿದರು. ಹುಬ್ಬಳ್ಳಿಯಲ್ಲಿ ೩೧ ವರ್ಷ ಹಳೆಯ ಕೇಸಿನಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಯನ್ನು ಬಂಧಿಸಿದ್ದನ್ನು ಖಂಡಿಸಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದ್ದಾರೆ.

You cannot copy contents of this page