ಕರ್ನಾಟಕ ಮದ್ಯ ವಶ

ಕಾಸರಗೋಡು: ಕಾಸರಗೋಡು ಅಬಕಾರಿ ರೇಂಜ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಜೋಸೆಫ್ ನೇತೃತ್ವದ ಅಬಕಾರಿ ತಂಡ ನೆಲ್ಲಿಕುಂಜೆ ಬಂಗರಗುಡ್ಡೆ ರೈಲು ಹಳಿ ಬಳಿ ನಿನ್ನೆ ನಡೆಸಿದ ಕಾರ್ಯಾಚರಣೆ ಯಲ್ಲಿ ಕರ್ನಾಟಕ ನಿರ್ಮಿತ ೮.೬೪ ಲೀಟರ್ ಮದ್ಯ (೧೮೦ ಎಂಎಲ್‌ನ ೪೫ ಪ್ಯಾಕೆಟ್) ವಶಪಡಿಸಿಕೊಂಡಿದೆ. ಈ ಸಂಬಂಧ ಬಂಗರಗುಡ್ಡೆಯ ಉಮೇಶ್ ನಾಯ್ಕ (೩೫) ಎಂಬಾತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆದರೆ ಆರೋಪಿ ತಲೆಮರೆಸಿಕೊಂಡಿರುವುದಾಗಿ ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಅಬಕಾರಿ ಕಾರ್ಯಾಚರಣೆ ಯಲ್ಲಿ ಅಬಕಾರಿ ಪ್ರಿವೆಂಟೀವ್ ಆಫೀಸರ್ ರಂಜಿತ್, ಸಿಇಒಗಳಾದ ಐ.ಬಿ. ಪಿ.ಬಿ. ಬಿಜೊ ಇ.ಕೆ. ಎಂಬವರು ಒಳಗೊಂಡಿದ್ದರು.

Leave a Reply

Your email address will not be published. Required fields are marked *

You cannot copy content of this page