ಕಾರಿನಲ್ಲಿ ಸಾಗಿಸುತ್ತಿದ್ದ ೭೨ ಲೀಟರ್ ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಕಾರಿನಲ್ಲಿ ಸಾಗಿಸುತ್ತಿದ್ದ ೭೨ ಲೀಟರ್ ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ ೭೨ ಲೀಟರ್ ಕರ್ನಾಟಕ ಮದ್ಯ ಸಹಿತ ಓರ್ವನನ್ನು ಅಬಕಾರಿ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ಸಂಬಂಧ ಹೊಸದುರ್ಗ ಅಜಾನೂರು ಕಡಪ್ಪುರದ ನಿತಿನ್ ಪಿ (೨೭) ಎಂಬಾತನನ್ನು ಬಂಧಿಸಲಾಗಿದೆ. ಈತನ ಕೈಯಲ್ಲಿದ್ದ ೨೪,೫೦೦ ರೂಪಾಯಿಗಳನ್ನು ವಶಪಡಿಸಲಾಗಿದೆ. ನಿನ್ನೆ ಸಂಜೆ ಮಂಜೇಶ್ವರ ಅಬಕಾರಿ ಚೆಕ್‌ಪೋಸ್ಟ್‌ನ ಅಬಕಾರಿ ಇನ್ಸ್‌ಪೆಕ್ಟರ್ ಆರ್. ರಿನೋಶ್ ಹಾಗೂ ತಂಡ ನಡೆಸಿದ ವಾಹನ ತಪಾಸಣೆ ವೇಳೆ ಮದ್ಯ ವಶಪಡಿಸಲಾಗಿದೆ. ಕರ್ನಾಟಕ ಭಾಗದಿಂದ ಆಗಮಿಸಿದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದನ್ನು ೧೫೬ ಬಾಟ್ಲಿ ಮದ್ಯ ಪತ್ತೆಯಾಗಿದೆ. ಅಬಕಾರಿ ಕಾರ್ಯಾಚರಣೆಯನ್ನು ಪ್ರಿವೆಂಟಿವ್ ಆಫೀಸರ್‌ಗಳಾದ ಸಜೀವ್ ವಿ, ಸಾಬು ಕೆ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ರಾಮ ಕೆ, ದಿನೂಪ್ ಕೆ, ಶ್ರಾಂಜಿತ್ ಎಂ, ಸಬಿತ್ ಲಾಲ್ ವಿ.ಬಿ., ಚಾಲಕ ಸತ್ಯ ಕೆ.ಇ. ಪಾಲ್ಗೊಂಡರು.

Leave a Reply

Your email address will not be published. Required fields are marked *

You cannot copy content of this page