ಕೆಎಸ್‌ಆರ್ ಟಿಸಿ ಬಸ್ ಬೈಕ್‌ಗೆ ಢಿಕ್ಕಿ: ಪೈಂಟಿಂಗ್ ಕಾರ್ಮಿಕ ಮೃತ್ಯು

ಕಾಸರಗೋಡು: ಕೆಎಸ್‌ಆರ್ ಟಿಸಿ ಬಸ್ ಬೈಕ್‌ಗೆ ಢಿಕ್ಕಿ ಹೊಡೆದು ಪೈಂಟಿಂಗ್ ಕಾರ್ಮಿಕ ಮೃತಪಟ್ಟ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ೧೦ ಗಂಟೆ ವೇಳೆ ಬಂದಡ್ಕದಲ್ಲಿ ಅಪಘಾತ ಸಂಭವಿಸಿದೆ. ಚಿಟ್ಟಾರಿಕಲ್ ನಿವಾಸಿಯೂ, ಚೂರಿತ್ತೋಡ್‌ನ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ಸಜಿ ಜೋಸ್ ಕುಳಿಪರಂಬಿಲ್ (೪೪) ಎಂಬವರು  ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅಪಘಾತ ಸ್ಥಳದಲ್ಲೇ ಸಜಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿದೆ. ಜೋಸ್ ಎಂಬವರ ಪುತ್ರನಾದ ಮೃತರು ಪತ್ನಿ, ಇಬ್ಬರು ಮಕ್ಕಳು ಸಹಿತ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You cannot copy content of this page