ಕೊಂಡೆವೂರು ಮಠದಲ್ಲಿ ಔಷಧೀಯ ಗಂಜಿ ವಿತರಣೆ 28ರಂದು

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಈ ತಿಂಗಳ 28ರಂದು ಔಷಧೀಯ ಗಂಜಿ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇರಳದ ನಾಟಿವೈದ್ಯರು ನಮ್ಮ ಶರೀರದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧೀಯ ಗಿಡಮೂಲಿಕೆಗಳಿಂದ ಮತ್ತು ನಮ್ಮ ಪರಿಸರದಲ್ಲೇ ಬೆಳೆಯುವ ಗಿಡ, ಬಳ್ಳಿ, ಎಲೆ, ಹೂ ಇತ್ಯಾದಿಗಳನ್ನು ಬಳಸಿ ಗಂಜಿ ಮತ್ತು ಖಾದ್ಯ ಪದಾರ್ಥಗಳನ್ನು ತಯಾರಿಸಲಿದ್ದಾರೆ. ಅಂದು ಬೆಳಿಗ್ಗೆ 10.30ಕ್ಕೆ ಆರೋಗ್ಯ ಮಾಹಿತಿ ಶಿಬಿರ, 11ಕ್ಕೆ ಕರ್ನಾಟಕ ಆಯುರ್ವೇದ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ ಡಾ. ರವಿರಾವ್  ಔಷಧೀಯ ಗಂಜಿ ಬಗ್ಗೆ ಉಪನ್ಯಾಸ ನೀಡುವರು. 11.45ಕ್ಕೆ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಕಿನ್ನಿಂಗಾರು ಸಸಿಹಿತ್ಲುವಿನ ನಾಟಿ ವೈದ್ಯೆ ಶ್ಯಾಮಳಾ ರೈ ಅವರಿಗೆ ಈ ವರ್ಷದ ‘ಆಯು ಶ್ರೀ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page